ಪ್ರಮುಖ ಸುದ್ದಿಗಳು

CORONA UPDATES: ಭಾರತದಲ್ಲಿ 7.42 ಲಕ್ಷ ಪ್ರಕರಣಗಳಲ್ಲಿ 4.56 ಲಕ್ಷ ಗುಣಮುಖ

  • ಇಲ್ಲಿವೆ ವಿವರ

CORONA UPDATES:

ಜಾಹೀರಾತು
  • ಭಾರತ: 7,42,417 ಪ್ರಕರಣಗಳು. ಸಾವು: 20,642 ಗುಣಮುಖ: 4,56,831
  • ಕರ್ನಾಟಕ 28,877 ಪ್ರಕರಣಗಳು ಸಾವು: 470 ಗುಣಮುಖ:11,876
  • ದಕ್ಷಿಣ ಕನ್ನಡ: 1,542 ಪ್ರಕರಣಗಳು ಸಾವು: 28  ಗುಣಮುಖ: 695

ಇದು ಭಾರತ, ಕರ್ನಾಟಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಇವತ್ತಿನ ಸ್ಥಿತಿ. ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾದಿಂದಾಗಿ 54 ಮಂದಿ ಸಾವನ್ನಪ್ಪಿದ್ದರೆ, ಹೊಸ 2062 ಪ್ರಕರಣಗಳು ದಾಖಲಾಗಿವೆ. ಇಂದು 778 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದವರ ಸಂಖ್ಯೆ 11,876. ರಾಜ್ಯದಲ್ಲಿ ಒಟ್ಟು 16,527 ಸಕ್ರಿಯ ಪ್ರಕರಣಗಳು ಇದ್ದರೆ, ಇಂದು 54 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 470ಕ್ಕೇರಿದೆ. ರಾಜ್ಯದಲ್ಲಿ ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 28,877 ಆಗಿದೆ. ಐಸಿಯುನಲ್ಲಿ 452 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಕ್ಷಿಣ ಕನ್ನಡ: ಮಂಗಳೂರು ಮಹಾನಗರ ಪಾಲಿಕೆ ಕಾರ್ಪೋರೇಟರ್, ಪಾಲಿಕೆ ಸಿಬ್ಬಂದಿ, ಸಿಐಎಸ್ಎಫ್ ಪೊಲೀಸರು, ಸಿಸಿಬಿ ಪೊಲೀಸ್ ಸೇರಿದಂತೆ 183 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. 7 ದಿನದ ಮಗು, 1 ವರ್ಷ, 4 ವರ್ಷ, 5 ವರ್ಷ ಮತ್ತು 3 ವರ್ಷದ ಇಬ್ಬರು ಸೇರಿದಂತೆ 183 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದು 12 ಮಂದಿ ಗುಣಮುಖರಾಗಿದ್ದು, ಮನೆಗೆ ಕಳುಹಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1542 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 28 ಮಂದಿ ಸಾವನ್ನಪ್ಪಿದ್ದಾರೆ. 695 ಮಂದಿ ಗುಣಮುಖರಾಗಿದ್ದು, 819 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಇಬ್ಬರು ಸಾವನ್ನಪ್ಪಿರುವುದಾಗಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಮಂಗಳೂರು ನಿವಾಸಿ 57 ವರ್ಷದ ಮಹಿಳೆ ಮತ್ತು ಪುತ್ತೂರು ನಿವಾಸಿ 32 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಇದುವರೆಗೆ 22,181 ಮಂದಿಯ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆದಿದೆ. ಜಿಲ್ಲೆಯ ಒಟ್ಟು ಜನಸಂಖ್ಯೆ 20,89,649 ಆಗಿದೆ. ಜಿಲ್ಲಾಡಳಿತದ ಪ್ರಕಾರ, ಜನಸಂಖ್ಯೆಯನ್ನು ಆಧರಿಸಿ 0.073 ಶೇಕಡಾ ಜನರಿಗೆ ಕೊರೊನಾ ಬಾಧಿಸಿದೆ. ಆದರೆ ತಪಾಸಣೆ ನಡೆಸಿದ್ದು ಕೇವಲ 22,181 ಮಂದಿಯನ್ನು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts