ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ: ಕೊರೊನಾ ಸಾವಿನ ಸಂಖ್ಯೆ 30ಕ್ಕೆ ಏರಿಕೆ, ಇಂದು 167 ಮಂದಿಗೆ ಸೋಂಕು

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ದೃಢಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಅದೇ ರೀತಿ ಸಾವಿನ ಸಂಖ್ಯೆಯೂ ಏರಿಕೆಯಾಗಿದ್ದು, ಇಂದು ಒಬ್ಬರು ಮೃತಪಟ್ಟಿದ್ದು, ಒಟ್ಟು 30 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತ ನೀಡುವ ಲೆಕ್ಕಾಚಾರದ ಪ್ರಕಾರ, 20,89,649 ಜನಸಂಖ್ಯೆಯಲ್ಲಿ 1,709 ಮಂದಿಗೆ ಸೋಂಕು ತಗಲಿದ್ದು, ಜನಸಂಖ್ಯೆ ಆಧರಿಸಿದರೆ ಪ್ರಮಾಣದ ಶೇಕಡಾವಾರು 0.081. ಆದರೆ ಗಂಟಲು ದ್ರವ ಮಾದರಿಯ ಪರೀಕ್ಷೆ 22,481 ಮಂದಿಯನ್ನಷ್ಟೇ ಮಾಡಿದ್ದು, ಅವರಲ್ಲಿ 1709 ಮಂದಿಗೆ ಸೋಂಕು ತಗಲಿದೆ ಎಂಬುದೂ ಗಮನಾರ್ಹ. ಇದರ ಶೇಕಡಾವಾರು ತೆಗೆದರೆ,  ಪರೀಕ್ಷೆಗೊಳಪಟ್ಟ  ಶೇ.7.6 ಮಂದಿಗೆ ಸೋಂಕಿದೆ. ಒಟ್ಟು 702 ಮಂದಿ ಸೋಂಕಿತರು ಗುಣಮುಖರಾಗಿರುವುದು ಸಮಾಧಾನಕರ ಅಂಶವಾದರೆ, ಇನ್ನೂ 977 ಮಂದಿ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಐಸಿಯುನಲ್ಲಿ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪೇಟೆ, ಹಳ್ಳಿ ಎನ್ನದೆ ಎಲ್ಲ ಪ್ರದೇಶಗಳಲ್ಲೂ ಕೊರೊನಾ ವೈರಸ್ ಬಾಧಿತರು ಇರುವುದು ಇಲ್ಲಿ ಗಮನಾರ್ಹ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts