ಬಂಟ್ವಾಳ

ಬಿ.ಸಿ.ರೋಡಿನ ವೈದ್ಯ ಕುಟುಂಬ ಗುಣಮುಖರಾಗಿ ಮನೆಗೆ

 ಕೊರೊನಾ ಸೋಂಕು ದೃಢಪಟ್ಟು ಬಿ.ಸಿ.ರೋಡಿನ ಮೂವರು ವೈದ್ಯರು ಸೇರಿದಂತೆ ಒಂದೇ ಕುಟುಂಬದ ಐವರು ಕಳೆದ ವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು, ಅವರೀಗ ಮನೆಗೆ ಮರಳಿದ್ದು, ಭಯ ಬೇಡ ಎಚ್ಚರವಿರಲಿ ಎಂಬ ಸಂದೇಶ ನೀಡಿದ್ದಾರೆ. ಬಿ.ಸಿ.ರೋಡಿನ ಕೈಕಂಬ ಸಮೀಪದ ಮನೆಯೊಂದರಲ್ಲಿ ಖಾಸಗಿ ಪ್ರಾಕ್ಟೀಸ್ ನಡೆಸುತ್ತಿದ್ದ ವೈದ್ಯರೊಬ್ಬರಿಗೆ ಸೋಂಕು ತಗಲಿತ್ತು. ಬಳಿಕ ಅವರ ತಂದೆ, ತಾಯಿ, ಪತ್ನಿ, ಮಗನಿಗೂ ಸೋಂಕು ದೃಢಪಟ್ಟಿತ್ತು. ರೋಗಲಕ್ಷಣವಿಲ್ಲದಿದ್ದರೂ ಸೋಂಕು ದೃಢಪಟ್ಟಿದ್ದ ಕಾರಣ ಅವರೆಲ್ಲರೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಯಾವುದೇ ತೊಂದರೆ ಇಲ್ಲದೆ, ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ನಿನ್ನೆ ಮರಳಿದ್ದೇವೆ. ವಯಸ್ಸಾದವರಿಗೂ ಯಾವುದೇ ರೋಗಲಕ್ಷಣ ಇಲ್ಲದಿದ್ದರೆ ಬೇಗನೆ ಗುಣವಾಗುತ್ತದೆ, ಕೊರೊನಾ ಕುರಿತು ಭಯ ಬೇಡ ಆದರೆ ಎಚ್ಚರ ಖಂಡಿತಾ ಇರಬೇಕು ಎಂದವರು ಹೇಳಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ