KARNATAKA COVID19 UPDATE: ಇಂದು 57 ಸಾವು, 2313 ಮಂದಿಗೆ ಸೋಂಕು. 1003 ಮಂದಿ ಗುಣಮುಖ

READ HERE FOR COMPLETE DETAILS

ಜಾಹೀರಾತು

 

ಜಾಹೀರಾತು

ಕರ್ನಾಟಕ ರಾಜ್ಯದಲ್ಲಿ ಇಂದು 2313 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇಂದು 57 ಮಂದಿ ಸಾವನ್ನಪ್ಪಿದ್ದು, 472 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 33,418 ಮಂದಿಗೆ ಸೋಂಕು ದೃಢಪಟ್ಟಿದ್ದು, ಅವರ ಪೈಕಿ 19,035 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 13,836 ಮಂದಿ ಗುಣಮುಖರಾಗಿದ್ದು, ಅವರಲ್ಲಿ ಇಂದು ಒಂದೇ ದಿನ 1003 ಮಂದಿ ಗುಣಮುಖರಾಗಿರುವುದು ವಿಶೇಷ.

ಎಂದಿನಂತೆಯೇ ಬೆಂಗಳೂರು ನಗರದಲ್ಲಿ ಗರಿಷ್ಠ ಸಂಖ್ಯೆಯ ಕೊರೊನಾ ಪೇಷಂಟ್ ಗಳಿದ್ದರೆ, ಅದರ ನಂತರದ ಸ್ಥಾನ ದಕ್ಷಿಣ ಕನ್ನಡ ಜಿಲ್ಲೆ. ಬೆಂಗಳೂರು ನಗರದಲ್ಲಿ ಒಟ್ಟು 1447 ಹೊಸ ಕೇಸ್ ಸೇರಿ, 15,329 ಮಂದಿಗೆ ಸೋಂಕು ತಗಲಿದ್ದರೆ, ಇಂದು 601 ಮಂದಿ ಸೇರಿ 3435 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.  ಆದರೆ 206 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಬೆಂಗಳೂರಿನಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 11,687.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 139 ಮಂದಿಗೆ ಇಂದು ಸೋಂಕು ತಗಲಿದ್ದರೆ, ಒಟ್ಟು ಸೋಂಕಿತರ ಸಂಖ್ಯೆ 1840 ಆಗಿದೆ. ಇಂದು 46 ಮಂದಿ ಸೇರಿ ಒಟ್ಟು 732 ಮಂದಿ ಬಿಡುಗಡೆಯಾಗಿದ್ದರೆ, ಒಟ್ಟು 31 ಸಾವಾಗಿದೆ ಎಂದು ರಾಜ್ಯ ಬುಲೆಟಿನ್ ಹೇಳಿದೆ. ಅದರ ಪ್ರಕಾರ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1075.

ಜಾಹೀರಾತು

ಒಂದೊಮ್ಮೆ ಕೊರೊನಾ ಸೋಂಕಿತರು ದಿಢೀರ್ ಹೆಚ್ಚಳವಾಗಿದ್ದ ಉಡುಪಿ ಜಿಲ್ಲೆಯಲ್ಲಿ ಇಂದು 34 ಮಂದಿಗೆ ಸೋಂಕು ತಗಲಿದರೂ ಅಲ್ಲಿ ಕೇವಲ 260  ಸಕ್ರಿಯ ಪ್ರಕರಣಗಳಿವೆ. ಅದನ್ನು ಹೋಲಿಸಿದರೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಬಂಟ್ವಾಳ ತಾಲೂಕುಗಳಲ್ಲಿ ದಿನೇ ದಿನೇ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ನೆರೆಯ ಕಾಸರಗೋಡು ಜಿಲ್ಲೆಯಲ್ಲೂ 17 ಹೊಸ ಪ್ರಕರಣಗಳು ಬಂದಿವೆ.

 DAKSHINA KANNADA DISTRICT: ಪ್ರತಿ ಬಾರಿಯೂ ಕೊರೊನಾ ಪ್ರಕರಣಗಳು ಬಂದಾಗಲೆಲ್ಲಾ ಗುಣವಾದವರ ಸಂಖ್ಯೆಯನ್ನು ಗಮನಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1848. ಗುಣಮುಖರಾದವರು 753. ಚಿಕಿತ್ಸೆ ಪಡೆಯುತ್ತಿರುವವರು 1057 ಮಂದಿ. ಒಟ್ಟು 22,585 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 20,737 ಮಂದಿಗೆ ಕೊರೊನಾ ಸೋಂಕು ಇಲ್ಲ. ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೊರಡಿಸಿದ ಪ್ರಕಟಣೆಯ ಪ್ರಕಾರ, ಇಂದು 139 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 8 ಮಂದಿ ಸಾವಿಗೀಡಾಗಿದ್ದು, ಸಾವಿನ ಕಾರಣ ನಿರ್ಧರಿಸಲು ಜಿಲ್ಲಾ ತಜ್ಞರ ಸಮಿತಿ ಪರಿಶೀಲನೆ ನಡೆಸುತ್ತಿದೆ ಎಂದಿದೆ. ಕೊರೊನಾಕ್ಕೆ ಸಂಬಂಧಿಸಿ, ಬಂಟ್ವಾಳ ತಾಲೂಕಿನಲ್ಲಿ ಶುಕ್ರವಾರ ಒಂದೇ ದಿನ 24 ಪ್ರಕರಣಗಳು ದೃಢಪಟ್ಟಿವೆ. ಪುದು ಗ್ರಾಮವೊಂದರಲ್ಲಿ 16 ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ ಮಕ್ಕಳು, ವಯಸ್ಸಾದವರು ಇದ್ದಾರೆ.

ಜಿಲ್ಲೆಯಲ್ಲಿ ಇಂದು  7 ಗಂಡಸರು ಮತ್ತು ಓರ್ವ ಮಹಿಳೆ ಕೊರೋನಾಗೆ ಬಲಿಯಾಗಿದ್ದಾಗಿ ಹೇಳಿರುವ ವರದಿಯಲ್ಲಿ, 35, 48, 55, 57, 65, 67, 68 ವರ್ಷದ ಪುರುಷರು ಮತ್ತು 58 ವರ್ಷದ ಮಹಿಳೆ ಸಾವನ್ನಪ್ಪಿರುವುದಾಗಿ ತಿಳಿಸಿದೆ. ಅದರನ್ವಯ ದ.ಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾದಂತಾಗಿದೆ.

ಜಾಹೀರಾತು

ರೋಗಲಕ್ಷಣ ಇಲ್ದಿದ್ರೂ ಕೊರೊನಾ ಪಾಸಿಟಿವ್ ಬರ್ತದೆ, ನಾವು ಏನು ಮಾಡಬೇಕು? ತಜ್ಞ ವೈದ್ಯ ಡಾ. ಚಕ್ರಪಾಣಿ ಹೀಗೆ ಹೇಳ್ತಾರೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "KARNATAKA COVID19 UPDATE: ಇಂದು 57 ಸಾವು, 2313 ಮಂದಿಗೆ ಸೋಂಕು. 1003 ಮಂದಿ ಗುಣಮುಖ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*