COVID UPDATE: ದಕ್ಷಿಣ ಕನ್ನಡ ಜಿಲ್ಲೆ: ಇಂದು 94 ಮಂದಿ ಡಿಸ್ಚಾರ್ಜ್, 196 ಹೊಸ ಪ್ರಕರಣ ದೃಢ

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಕೋವಿಡ್ 19ಗೆ ಸಂಬಂಧಿಸಿ ಒಟ್ಟು 196 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 2,230 ಆದಂತಾಗಿದೆ. ಆದರೆ ಇವರ ಪೈಕಿ 876 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇಂದು ಒಂದೇ ದಿನ 94 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಹೊರಡಿಸಿದ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಜಾಹೀರಾತು

ಅದರ ಪ್ರಕಾರ, 24,741 ಮಂದಿಯ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆದಿದೆ. ಅವುಗಳ ಪೈಕಿ 22,511 ಮಂದಿಗೆ ಕೊರೊನಾ ಸೋಂಕು ಇಲ್ಲ. 2,230 ಮಂದಿಗೆ ಸೋಂಕು ದೃಢಪಟ್ಟಿದೆ. ಇವರಲ್ಲಿ 196 ಇವತ್ತು ವರದಿಯಾಗಿದೆ. ಈ ಪ್ರಕಾರ, 1,308 ಮಂದಿ ಜಿಲ್ಲೆಯ ನಾನಾ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೊಳಪಟ್ಟು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದರೊಂದಿಗೆ ವರದಿಯಾದ ಮರಣ ಪ್ರಕರಣಗಳ ಪಟ್ಟಿಯನ್ನೂ ಜಿಲ್ಲಾಧಿಕಾರಿ ನೀಡಿದ್ದಾರೆ. ಮರಣ ಪ್ರಕರಣಗಳ ಕಾರಣಕ್ಕೆ ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ನಿರೀಕ್ಷಣೆಯಲ್ಲಿದೆ. ಜಿಲ್ಲಾಡಳಿತ ನೀಡಿದ ಪಟ್ಟಿಯಲ್ಲಿ 5 ಮಂದಿ ಕೊರೊನಾ ಸೋಂಕಿತರು ಇಂದು ಸಾವನ್ನಪ್ಪಿದ್ದಾರೆ. ಅವರಲ್ಲಿ 72 ವರ್ಷದ ಪುರುಷ, 50 ವರ್ಷದ ಪುರುಷ, 58 ವರ್ಷದ ಮಹಿಳೆ, 68 ವರ್ಷದ ಮಹಿಳೆ, 55 ವರ್ಷದ ಮಹಿಳೆ ಸೇರಿದ್ದಾರೆ. ಇವರಲ್ಲಿ 68 ವರ್ಷದ ಮಹಿಳೆ ಮತ್ತು 55 ವರ್ಷದ ಪುರುಷ ಇಂದು ಮೃತಪಟ್ಟಿದ್ದರೆ, 58 ವರ್ಷದ ಮಹಿಳೆ ಜುಲೈ 10ರಂದು ಸಾವನ್ನಪ್ಪಿದ್ದರು. ಉಳಿದಿಬ್ಬರು ನಿನ್ನೆ ಮೃತಪಟ್ಟಿದ್ದಾರೆ.

ಬಿ.ಸಿ.ರೋಡಿನ 4 ಸೇರಿದಂತೆ ಬಂಟ್ವಾಳ ತಾಲೂಕಿನಲ್ಲಿ 16 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಇದರೊಂದಿಗೆ ಬಂಟ್ವಾಳ ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "COVID UPDATE: ದಕ್ಷಿಣ ಕನ್ನಡ ಜಿಲ್ಲೆ: ಇಂದು 94 ಮಂದಿ ಡಿಸ್ಚಾರ್ಜ್, 196 ಹೊಸ ಪ್ರಕರಣ ದೃಢ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*