ಜಿಲ್ಲಾ ಸುದ್ದಿ

COVID UPDATE: ದಕ್ಷಿಣ ಕನ್ನಡದಲ್ಲಿ ಇಂದು 73 ಮಂದಿಗೆ ಸೋಂಕು, 104 ಡಿಸ್ಚಾರ್ಜ್

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಕಾಲದ ಬಳಿಕ ಸೋಂಕಿತರ ಸಂಖ್ಯೆ ಗುಣಮುಖರಾಗಿ ಮನೆಗೆ ತೆರಳುವವರ ಸಂಖ್ಯೆಗಿಂತ ಕಮ್ಮಿ ಇದೆ. ಇಂದು 73 ಮಂದಿಗೆ ಸೋಂಕು ದೃಢಪಟ್ಟರೆ, 104 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1379 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, 1089 ಮಂದಿ ಗುಣಮುಖರಾದಂತಾಗಿದೆ. ಇದುವರೆಗೆ 25,265 ಮಂದಿಯ ಪರೀಕ್ಷೆಯಲ್ಲಿ 2525 ಮಂದಿಗೆ ಸೋಂಕು ತಗಲಿದೆ. ಬಂಟ್ವಾಳ ತಾಲೂಕಿನ 8 ಮಂದಿಗೆ ಬುಧವಾರ ಕೊರೊನಾ ಸೋಂಕು ದೃಢಪಟ್ಟಿದೆ. ಫರಂಗಿಪೇಟೆಯ ಇಬ್ಬರು, ವಿಟ್ಲದ ಒಬ್ಬರು, ಮಂಜನಾಡಿಯ ಒಬ್ಬರು, ಪಾಣೆಮಂಗಳೂರಿನ ಇಬ್ಬರು, ಬಂಟ್ವಾಳದ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ನರಿಕೊಂಬು ಗ್ರಾಮದಲ್ಲಿ ಮಂಗಳವಾರ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯ ಪತ್ನಿಗೂ ಇಂದು ಸೋಂಕು ದೃಢಪಟ್ಟಿದೆ.

ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಬಂಟ್ವಾಳ ತಾಲೂಕಿನವರು ಮತ್ತು ಒಬ್ಬರು ಸುಳ್ಯ ತಾಲೂಕಿನವರು ಸಾವನ್ನಪ್ಪಿದ್ದಾರೆ.ಸುಳ್ಯ ತಾಲೂಕಿನ 60 ವರ್ಷದ ಮಹಿಳೆ, ಬಂಟ್ವಾಳ ತಾಲೂಕು ಒಕ್ಕೆತ್ತೂರಿನ 73 ವರ್ಷದ ಪುರುಷ, ಬಂಟ್ವಾಳ ಪಾಣೆಮಂಗಳೂರು ಸಮೀಪ ಜೈನರಪೇಟೆಯ 70 ವರ್ಷದ ಪುರುಷ ಮತ್ತು ನರಿಂಗಾಣದ 68 ವರ್ಷದ ಮಹಿಳೆ ಮೃತಪಟ್ಟವರು. ಇದೀಗ ಜಿಲ್ಲಾಧಿಕಾರಿ ಹೊರಡಿಸಿದ ಕೋವಿಡ್  ಸಂಬಂಧಿಸಿದ ಪ್ರಕಟಣೆಯಲ್ಲಿ ಈ ಮೂವರು ಮೃತಪಟ್ಟಿರುವ ಕುರಿತು ಮಾಹಿತಿಯನ್ನು ನೀಡಿದ್ದು, ಮರಣ ಪ್ರಕರಣಗಳ ಕಾರಣ ನಿರ್ಧರಿಸಲು ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ