ಪುಂಜಾಲಕಟ್ಟೆ

ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ನಿಧನ

ಯಕ್ಷಗಾನ ಹಿಮ್ಮೇಳ ವಾದಕ, ಬಂಟ್ವಾಳ ತಾಲೂಕಿನ ಕಾವಳಕಟ್ಟೆ ನಿವಾಸಿ ಯುವರಾಜ ಆಚಾರ್ಯ ಕಾವಳಕಟ್ಟೆ( 60) ಅನಾರೋಗ್ಯದಿಂದ ಜು.14 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರ, ಪುತ್ರಿಯನ್ನು ಅವರು ಅಗಲಿದ್ದಾರೆ. ಆರಂಭದಲ್ಲಿ ಹವ್ಯಾಸಿ ಮದ್ದಳೆವಾದಕರಾಗಿದ್ದ ಅವರು ಬಳಿಕ ಸುಮಾರು 15 ವರ್ಷಗಳ ಕಾಲ ವಿವಿಧ ಮೇಳಗಳಲ್ಲಿ ಮದ್ದಳೆ ಗಾರರಾಗಿ ಸೇವೆ ಸಲ್ಲಿಸಿದ್ದರು. ಹೊಸನಗರ ಮೇಳ, ಹಿರಿಯಡ್ಕ, ಮಂಗಳಾದೇವಿ, ಬಪ್ಪನಾಡು, ಸಸಿಹಿತ್ಲು ಮೇಳಗಳಲ್ಲಿ ಮದ್ದಳೆ ವಾದಕರಾಗಿದ್ದ ಅವರು ಅನಾರೋಗ್ಯ ದಿಂದ ಮೇಳದಿಂದ ನಿವೃತ್ತಿ ಪಡೆದಿದ್ದರು. ಪ್ರಸ್ತುತ ಯಕ್ಷಗಾನ, ತಾಳ ಮದ್ದಳೆ ಗಳಲ್ಲಿ ಚಕ್ರತಾಳ ವಾದಕರಾಗಿ ಬೇಡಿಕೆ ಪಡೆದಿದ್ದರು. ಪುಂಜಾಲಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ ಮತ್ತು ರಿಲಯನ್ಸ್ ಕ್ರಿಕೇಟರ್ಸ್, ಶ್ರೀ ಶಾರದಾಂಬಾ ಯುವಕ ಮಂಡಲದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

ಜಾಹೀರಾತು

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ