ಒಂದೇ ದಿನ 311 ಮಂದಿಗೆ ಕೊರೊನಾ ಸೋಂಕು ದೃಢ

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 26,242 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆಯನ್ನು ನಡೆಸಲಾಗಿದೆ. ಇವುಗಳ ಪೈಕಿ 3074 ಮಂದಿಗೆ ಸೋಂಕು ದೃಢಪಟ್ಟಿದೆ. 1725 ಮಂದಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, 1278 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು 311 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 115 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 

ಜಾಹೀರಾತು

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಶೇ.50 ಲಕ್ಷಣರಹಿತರಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವ ಅವಕಾಶ ಇರುತ್ತದೆ. ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಸ್ಥಳೀಯ ಸಂಸ್ಥೆಗಳಲ್ಲಿರುವ ದೂರವಾಣಿ ಹಾಗೂ ವಿಡಿಯೋ ಕಾಲ್ ಗಳಿಂದ ಸಂಪರ್ಕಿಸಲಾಗುತ್ತದೆ. ಸ್ಥಳೀಯ ವೈದ್ಯರ ನೆರವಿನಿಂದ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಕೋವಿಡ್ ಕುಂದು ಕೊರತೆಗಳನ್ನು ಗಮನಿಸಲು ಪಿಜಿಆರ್ ಸೆಲ್ ಸ್ಥಾಪಿಸಲಾಗಿದೆ. ಕೋವಿಡ್ ಸೋಂಕಿತ ವ್ಯಕ್ತಿಗಳಿಗೆ ಆಂಬುಲೆನ್ಸ್ ಸಂಬಂಧಿತ ಮಾಹಿತಿಗೆ 108 ಮತ್ತು 1077 ಸಂಖ್ಯೆ ಅಥವಾ 0824 2441444 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

ಇಂದು 8 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಏಳು ಮಂದಿ ಪುರುಷರು ಹಾಗೂ ಓರ್ವ ಮಹಿಳೆ. 53, 56, 65, 68, 69, 70 ಹಾಗೂ 72 ವರ್ಷದ ಏಳು ಮಂದಿ ಪುರುಷರು ಸಾವನ್ನಪ್ಪಿದ್ದು, 72 ವರ್ಷದ ಓರ್ವ ಮಹಿಳೆ ಮೃತಪಟ್ಟಿದ್ದಾಗಿ ಜಿಲ್ಲಾಧಿಕಾರಿಗಳ ಕೋವಿಡ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇವರ ಸಾವು ಯಾವ ರೀತಿ ಸಂಭವಿಸಿದ್ದು ಎಂಬ ಕುರಿತು ತಜ್ಞರ ಸಮಿತಿಗೆ ವರದಿ ನೀಡಲು ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಂದೇ ದಿನ 311 ಮಂದಿಗೆ ಕೊರೊನಾ ಸೋಂಕು ದೃಢ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*