ಜಿಲ್ಲಾ ಸುದ್ದಿ

ಮನೆಯಲ್ಲೇ ಚಿಕಿತ್ಸೆಯಲ್ಲಿರುವ ಕೋರೋನಾ ಸೋಂಕಿತರ ನಿಗಾಕ್ಕೆ ಸಹಾಯವಾಣಿ

ಜಾಹೀರಾತು

ಜಿಲ್ಲೆಯಲ್ಲಿರುವ ಕೊರೊನಾ ಸೋಂಕು ಪ್ರಕರಣಗಳಲ್ಲಿ ಶೇ.50ರಷ್ಟು ಲಕ್ಷಣರಹಿತರಿದ್ದು, ಇವರಿಗೆ ಮನೆಯಲ್ಲೇ ನಿಗಾವಣೆಯಲ್ಲಿರಿಸಲಾಗುತ್ತದೆ. ಸದ್ಯ ಮನೆಯಲ್ಲಿಯೇ ನಿಗಾವಣೆ ಯಲ್ಲಿರುವ ಕೋರೋನಾ ಸೋಂಕಿತರ ಸಹಾಯಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪಟ್ಟಣ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿಯವನ್ನು ತೆರೆಯಲಾಗಿದೆ.

ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮಾರ್ಗದರ್ಶನದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಮೇಲುಸ್ತುವಾರಿಯಲ್ಲಿ  ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಮುಖ್ಯವಾಗಿ ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲದ ಕೋವಿಡ್ ಸೋಂಕಿತರು ಅವರ ಮನೆಯಲ್ಲಿ ನಿಗಾವಣೆಯಲ್ಲಿ ಇರುವುದರಿಂದ ಅವರ ಮೇಲ್ವಿಚಾರಣೆಯನ್ನು ಸಹಾಯವಾಣಿ ಮೂಲಕ ಮಾಡಲಾಗುತ್ತದೆ. ರೋಗಿಗಳಿಗೆ ವೈದ್ಯರು ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಿ, ಅವರಿಂದ ನಿರಂತರ ಮಾಹಿತಿ ಪಡೆಯಲಿದ್ದಾರೆ.

ಯಾವುದೇ ರೋಗಲಕ್ಷಣಗಳನ್ನು ಹೊಂದಿಲ್ಲದ ಸೋಂಕಿತರಿಗಾಗಿ ಅವರ ಮನೆಯಲ್ಲಿರಲು ಸರಕಾರ ಅನುಮತಿ ನೀಡಿದೆ. ಅಂತಹವರ ಮೇಲ್ವಿಚಾರಣೆಯನ್ನು ಸಹಾಯವಾಣಿ ಮೂಲಕ ಮಾಡಲಾಗುತ್ತದೆ. ಈಗಾಗಲೇ ಬಂಟ್ವಾಳ, ಉಳ್ಳಾಲ, ಸೋಮೇಶ್ವರ, ಸುಳ್ಯ, ಪುತ್ತೂರು, ಮೂಡಬಿದ್ರೆ  ನಗರ ಸಂಸ್ಥೆಗಳಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸುಳ್ಯ, ಪುತ್ತೂರು, ಮೂಡಬಿದ್ರೆ ಗಳಲ್ಲಿ ಕಡಿಮೆ ಸಂಖ್ಯೆಯ ರೋಗಿಗಳಿದ್ದು, ಬಂಟ್ವಾಳ ಉಳ್ಳಾಲ ಹಾಗೂ ಸೋಮೇಶ್ವರದಲ್ಲಿ ಅಧಿಕ ಸಂಖ್ಯೆಯಲ್ಲಿ ಹೋಂ ಕ್ವಾರೆಂಟೈನ್ ನಲ್ಲಿ ಕೋವಿಡ್ ಸೋಂಕಿತರಿದ್ದಾರೆ. ಜಿಲ್ಲೆಯ ಕೆಲವು ನಗರ ವ್ಯಾಪ್ತಿಯಲ್ಲಿ ಕಡಿಮೆ ಸಂಖ್ಯೆಯ ಕೋವಿಡ್ ಸೋಂಕಿತರಿದ್ದು, ಈ ಸಹಾಯವಾಣಿ ಮೂಲಕ ಆಯಾ ತಾಲೂಕಿನ ಇಡೀ ವ್ಯಾಪ್ತಿಯಲ್ಲಿ ಕೂಡ ಸಹಾಯವಾಣಿ ನೆರವು ನೀಡಲು ಚಿಂತಿಸಲಾಗಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ತಿಳಿಸಿದ್ದಾರೆ.

ಈ ಸಹಾಯವಾಣಿಯಲ್ಲಿ ಪುರಸಭೆ ಸಿಬ್ಬಂದಿಗಳೊಂದಿಗೆ  ವೈದ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಇರಲಿದ್ದು,   ಮನೆಯಲ್ಲಿರುವ ರೋಗಿಗಳ ಆರೋಗ್ಯ ಮಾಹಿತಿಯನ್ನು ವಿಡಿಯೋ ಕಾಲ್ ಮೂಲಕ ಪಡೆಯಲಿದ್ದಾರೆ.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts