ಉಚಿತ ಕೋವಿಡ್ ಪರೀಕ್ಷೆ: ದ.ಕ. ಜಿಲ್ಲೆಗೆ Rapid antigen test kit ಕೂಡಲೇ ಸರಬರಾಜು: ಅಶ್ವತ್ಥನಾರಾಯಣ

ಜಾಹೀರಾತು

ಕೊವಿಡ್-19 ಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕುರಿತು, ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ತುರ್ತು ಸಭೆ ನಡೆಸಿದರು.

ಜಾಹೀರಾತು

ಸಭೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಶಾಸಕರುಗಳಾದ ವೇದವ್ಯಾಸ ಕಾಮತ್, ಹರೀಶ್ ಪುಂಜ, ಯು.ಟಿ.ಖಾದರ್ ಹಾಗೂ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮುಖಾಮುಖಿ ಮಾತನಾಡಿದ ಉಪ ಮುಖ್ಯ ಮಂತ್ರಿ, ಡಾ ಅಶ್ವತ್ಥನಾರಾಯಣ, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋರಿಕೆಯಂತೆ ಉಚಿತವಾಗಿ ಕೋವಿಡ್-19 ಪರೀಕ್ಷೆ ಮಾಡಲು 25,000ರ Rapid antigen test kit ಗಳನ್ನು ಕೂಡಲೇ ಜಿಲ್ಲೆಗೆ ಸರಬರಾಜು ಮಾಡಲಾಗುವುದು ಹಾಗೂ 15 ಆಂಬುಲೆನ್ಸ್‌ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು. ಕೋವಿಡ್-19 ಸೋಂಕಿತರು, ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ, ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.

ಇನ್ನು ಮುಂದೆ ಕೋವಿಡ್ -19 ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್-19 ಟೆಸ್ಟ್ ಮಾಡಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಉಪಮುಖ್ಯಮಂತ್ರಿ, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದರು.

ಈ ಮಹತ್ವದ ಸಭೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್-19 ಪೀಡಿತರ ಸಮಸೈಗಳು ಪರಿಹಾರ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದರು.ಜಿಲ್ಲೆಯ ನೆರವಿಗೆ ಬಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಾ. ಅಶ್ವತ್ ನಾರಾಯಣ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಉಚಿತ ಕೋವಿಡ್ ಪರೀಕ್ಷೆ: ದ.ಕ. ಜಿಲ್ಲೆಗೆ Rapid antigen test kit ಕೂಡಲೇ ಸರಬರಾಜು: ಅಶ್ವತ್ಥನಾರಾಯಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*