ಬಂಟ್ವಾಳ

ಉಚಿತ ಕೋವಿಡ್ ಪರೀಕ್ಷೆ: ದ.ಕ. ಜಿಲ್ಲೆಗೆ Rapid antigen test kit ಕೂಡಲೇ ಸರಬರಾಜು: ಅಶ್ವತ್ಥನಾರಾಯಣ

ಜಾಹೀರಾತು

ಕೊವಿಡ್-19 ಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕುರಿತು, ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ತುರ್ತು ಸಭೆ ನಡೆಸಿದರು.

ಸಭೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಶಾಸಕರುಗಳಾದ ವೇದವ್ಯಾಸ ಕಾಮತ್, ಹರೀಶ್ ಪುಂಜ, ಯು.ಟಿ.ಖಾದರ್ ಹಾಗೂ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮುಖಾಮುಖಿ ಮಾತನಾಡಿದ ಉಪ ಮುಖ್ಯ ಮಂತ್ರಿ, ಡಾ ಅಶ್ವತ್ಥನಾರಾಯಣ, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋರಿಕೆಯಂತೆ ಉಚಿತವಾಗಿ ಕೋವಿಡ್-19 ಪರೀಕ್ಷೆ ಮಾಡಲು 25,000ರ Rapid antigen test kit ಗಳನ್ನು ಕೂಡಲೇ ಜಿಲ್ಲೆಗೆ ಸರಬರಾಜು ಮಾಡಲಾಗುವುದು ಹಾಗೂ 15 ಆಂಬುಲೆನ್ಸ್‌ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು. ಕೋವಿಡ್-19 ಸೋಂಕಿತರು, ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ, ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.

ಇನ್ನು ಮುಂದೆ ಕೋವಿಡ್ -19 ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್-19 ಟೆಸ್ಟ್ ಮಾಡಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಉಪಮುಖ್ಯಮಂತ್ರಿ, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದರು.

ಈ ಮಹತ್ವದ ಸಭೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್-19 ಪೀಡಿತರ ಸಮಸೈಗಳು ಪರಿಹಾರ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದರು.ಜಿಲ್ಲೆಯ ನೆರವಿಗೆ ಬಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಾ. ಅಶ್ವತ್ ನಾರಾಯಣ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts