ಜಿಲ್ಲಾ ಸುದ್ದಿ

ದಕ್ಷಿಣ ಕನ್ನಡ – ಎರಡು ದಿನಗಳಲ್ಲಿ 500ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು

ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 311 ಪ್ರಕರಣಗಳು ವರದಿಯಾಗಿದ್ದರೆ, ಶನಿವಾರ 237 ಮಂದಿಗೆ ಸೋಂಕು ದೃಢಪಟ್ಟಿದೆ. ಈವರೆಗೆ ಒಟ್ಟು 26,368 ಮಂದಿಯ ಗಂಟಲು ದ್ರವ ಮಾದರಿಯನ್ನು ಪಡೆದುಕೊಂಡು ತಪಾಸಣೆ ನಡೆಸಲಾಗಿದ್ದು, ಇವುಗಳ ಪೈಕಿ 3,311 ಮಂದಿಗೆ ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃಢಪಟ್ಟಿದೆ. ಇಂದು 109 ಮಂದಿ ಸೇರಿ ಒಟ್ಟು 1387 ಮಂದಿ  ಡಿಸ್ಚಾರ್ಜ್  ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 1848ಕ್ಕೇರಿದೆ. ಬಂಟ್ವಾಳ ತಾಲೂಕಿನಲ್ಲೂ ಎರಡು ದಿನಗಳಲ್ಲಿ ಸುಮಾರು 35ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, ಇವರು ನಾನಾ ಕಾರಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೊರೊನಾ ಸೋಂಕು ಇರುವುದು ಕಂಡುಬಂದಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ತಜ್ಞರ ಸಮಿತಿಯಿಂದ ವರದಿ ಸ್ವೀಕೃತವಾಗಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ