ಬಂಟ್ವಾಳ

ವಿಹಿಂಪ, ಬಜರಂಗದಳ ಸದಸ್ಯರಿಂದ ಹಡೀಲು ಬಿದ್ದ ಗದ್ದೆ ವ್ಯವಸಾಯ

ಜಾಹೀರಾತು

ಹಡೀಲು ಬಿದ್ದ ಗದ್ದೆ ವ್ಯವಸಾಯ ಮಾಡುವ ಮೂಲಕ ಅಜಿಲಮೊಗರುವಿನ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಸಂಘಟನೆ ಯುವಕರಿಗೆ ಪ್ರೇರಣಾದಾಯಿ ಕಾರ್ಯವನ್ನು ನಡೆಸಿತು. ಹಲವಾರು ವರ್ಷಗಳಿಂದ ಹಡೀಲು ಬಿದ್ದಿರುವ ಸರಪಾಡಿಯ ಗದ್ದೆಯೊಂದನ್ನು ಮಾಲಕರಿಂದ ಉಚಿತವಾಗಿ ಪಡೆದು ಭತ್ತದ ಕೃಷಿ ಕಾರ್ಯವನ್ನು ಸಂಘಟನೆ ನಡೆಸಿದೆ. ಭತ್ತದ ಕೃಷಿ ಮಾಡಿ ಫಸಲನ್ನು ಸಮಾಜದ ಬಡವರ್ಗದ ಜನರಿಗೆ ನೀಡುವ ಉದ್ದೇಶದಿಂದ ಸಂಘಟನೆ ಮುಂದಾಗಿದೆ. ವಿಶ್ವ ಹಿಂದು ಪರಿಷತ್ತ್ ಭಜರಂಗದಳ ಜೈ ಹನುಮಾನ್ ಶಾಖೆ ಅಜಿಲಮೊಗರು ಸದಸ್ಯರು ಈ ಕಾರ್ಯ ಮಾಡಿದರು.

ಜಾಹೀರಾತು

ಬಡಜನರಿಗೆ ಸಹಾಯ ಮಾಡಬೇಕು ಎಂಬ ಉದ್ದೇಶವನ್ನಿಟ್ಟುಕೊಂಡು ಸಂಘಟನೆಯ ಪ್ರಮುಖರು ಸರಪಾಡಿಯಲ್ಲಿ ಅನೇಕ ವರ್ಷಗಳಿಂದ ಹಡೀಲು ಬಿದ್ದಿದ್ದ  ನವೀನ್ ಶಾಂತಿ ಎಂಬವರ 4 ಮುಡಿ ಹಡೀಲು ಗದ್ದೆಯನ್ನು ಉಚಿತವಾಗಿ ಪಡೆದು ನೇಜಿ ಕೃಷಿ ಮಾಡಿದರು. ಈ ಗದ್ದೆಯಲ್ಲಿ ಬರುವ ಅಕ್ಕಿ ಯನ್ನು  ಕಡುಬಡವರಿಗೆ ವಿತರಿಸುವುದು ಹಾಗೂ  ಬೈ ಹುಲ್ಲನ್ನು ಗೋಶಾಲೆಗೆ ನಿಡುದೆಂದು ತೀರ್ಮಾನಿಸಿದರು. ಜಿಲ್ಲಾ ಸ.ಸಂಚಾಲಕ್ ಗುರುರಾಜ್ ಬಂಟ್ವಾಳ್, ಪ್ರಖಂಡ ಸಂಚಾಲಕ್ ಶಿವಪ್ರಸಾದ್ ತುಂಬೆ, ಪ್ರಖಂಡ ಸಹ.ಸಂಚಾಲಕ್ ಸಂತೋಷ್ ಕುಲಾಲ್, ಪ್ರಗತಿಪರ ಕೃಷಿಕರಾದ ಪುರುಷೋತ್ತಮ ಪೂಜಾರಿ ಮಜಲು ಹಾಗೂ ಸ್ಥಳ ದಾನಿಗಳು ಮತ್ತು ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ