ಬಂಟ್ವಾಳ

ಲಾಕ್ ಡೌನ್, ಕೊರೊನಾ ಭೀತಿ: ಆಟಿ ಅಮಾವಾಸ್ಯೆಯಂದು ನಡೆಯದ ತೀರ್ಥ ಸ್ನಾನ

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟಿ ಅಮಾವಾಸ್ಯೆ ಎಂದರೆ ಅದಕ್ಕೆ ವಿಶೇಷ ಮಹತ್ವವಿದೆ. ಆ ದಿನ ಪುಣ್ಯಕ್ಷೇತ್ರಗಳಲ್ಲಿ ತೀರ್ಥ ಸ್ನಾನ ಮಾಡಿದರೆ ವಿಶೇಷ ಫಲವಿದೆ ಎಂಬ ನಂಬಿಕೆ ಭಕ್ತರಲ್ಲಿದೆ. ಬಂಟ್ವಾಳ ತಾಲೂಕಿನ ಕಾರಿಂಜ ಕ್ಷೇತ್ರ ಹಾಗೂ ನರಹರಿ ಪರ್ವತ ಕ್ಷೇತ್ರಗಳಲ್ಲಿ ಪ್ರತಿ ವರ್ಷ ಆಟಿ ಅಮಾವಾಸ್ಯೆಯ ತೀರ್ಥಸ್ನಾನದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದರು. ಈ ಬಾರಿ ಮಾತ್ರ ಕೊರೊನಾ ಹಿನ್ನೆಲೆಯಲ್ಲಿ ಭಕ್ತರಿಗೆ ಪ್ರವೇಶವಿರಲಿಲ್ಲ. ಸೋಮವಾರ ಆಟಿ ಅಮಾವಾಸ್ಯೆ ಇದ್ದರೂ ಕೋವಿಡ್-19 ನಿಯಂತ್ರಣದ ನಿಟ್ಟಿನಲ್ಲಿ ಸರಕಾರದ ಆದೇಶದಂತೆ ಭಕ್ತರಿಗೆ ಪುಣ್ಯಕ್ಷೇತ್ರಗಳಾದ ಕಾರಿಂಜ ಮತ್ತು ನರಹರಿ ಪರ್ವತ ಸನ್ನಿಧಿಯಲ್ಲಿ ತೀರ್ಥಸ್ನಾನದಲ್ಲಿ ಪಾಲ್ಗೊಳ್ಳುವುದಕ್ಕೆ ಅವಕಾಶವಿರಲಿಲ್ಲ. ಪ್ರತಿವರ್ಷ ಆಟಿ ಅಮಾವಾಸ್ಯೆಯ ದಿನ ಸಾವಿರಾರು ಭಕ್ತರಿಂದ ತುಂಬಿರುತ್ತಿದ್ದ ಈ ಎರಡು ಪುಣ್ಯ ಕ್ಷೇತ್ರಗಳು ಈ ಬಾರಿ ಭಕ್ತರಿಲ್ಲದೆ ಬಿಕೋ ಎನ್ನುತ್ತಿತ್ತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.