ಹಿರಿಯ ರಾಜಕಾರಣಿ, ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರು ಜುಲೈ 4ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೋವಿಡ್ ಸೋಂಕಿನಿಂದಾಗಿ ದಾಖಲಾಗಿದ್ದರು. ಈ ಸಂದರ್ಭ ಅವರ ಅಭಿಮಾನಿಗಳು ಜಿಲ್ಲೆಯ ನಾನಾ ದೇವಸ್ಥಾನಗಳಲ್ಲಿ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದರು. ದೈವ ದೇವರ ಅನುಗ್ರಹದಿಂದಾಗಿ ನಾವೆಲ್ಲರೂ ಗುಣಮುಖರಾಗಿದ್ದು, ನಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲ ಬಂಧುಗಳಿಗೆ, ಹಿತೈಷಿಗಳಿಗೆ, ಉತ್ತಮ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗಕ್ಕೆ ಮತ್ತು ಸಂಸ್ಥೆಗೆ ಧನ್ಯವಾದಗಳು ಎಂದವರು ಸಂದೇಶದಲ್ಲಿ ತಿಳಿಸಿದ್ದಾರೆ. ಕೊರೊನಾ ರೋಗಕ್ಕೆ ಯಾರೂ ಭಯಪಡಬೇಕಾಗಿಲ್ಲ. ಪ್ರತಿಯೊಬ್ಬರೂ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ, ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲು ಉತ್ತಮ ಪೌಷ್ಠಿಕ ಆಹಾರ, ಕಷಾಯ ಸೇವನೆ ಮಾಡಿ. ಪ್ರತಿಯೊಬ್ಬರೂ ಜಾಗ್ರತೆ ವಹಿಸಿ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಎಂದವರು ಸಲಹೆ ನೀಡಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…