ಬಂಟ್ವಾಳ

ಮೇಲ್ಕಾರ್ ಸಮೀಪ ಮತ್ತದೇ ಹೊಂಡ, ವಾಹನ ಸಂಚಾರ ಕಡಿಮೆ ಇದ್ದರೂ ಹದಗೆಟ್ಟಿದೆ ಹೆದ್ದಾರಿ

ಜಾಹೀರಾತು

ಪ್ರತಿ ವರ್ಷ ಕಾಣಿಸುವ ಹೊಂಡ ಈ ವರ್ಷವೂ ಉದ್ಭವವಾಗಿದೆ. ಮೇಲ್ಕಾರ್ ನ ಸಂಚಾರಿ ಪೊಲೀಸ್ ಠಾಣೆಯ ಪಕ್ಕದಲ್ಲಿ ಹೆದ್ದಾರಿಯಲ್ಲಿ ಹೊಂಡ ಕಾಣಿಸಿಕೊಂಡಿದೆ. ಇದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸ್ಥಿತಿ. ಈ ಬಾರಿ ವಾಹನ ಸಂಚಾರ ಕಡಿಮೆ ಇದ್ದರೂ ರಸ್ತೆ ಅಧೋಗತಿ.

ಜಾಹೀರಾತು

ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಬಳಿಯೂ ಹೊಂಡಗಳಿವೆ. ಆದರೆ ಕಳೆದ ವರ್ಷದಷ್ಟು ಅಪಾಯಕಾರಿಯಾಗಿಲ್ಲ. ಮಳೆ ಬಂದರೆ ರಸ್ತೆಗೆ: ಮಳೆ ನೀರು ಹರಿದು ಹೋಗುವುದಕ್ಕೆ ಸರಿಯಾದ ವ್ಯವಸ್ಥೆಯನ್ನು ಇನ್ನೂ ಕಲ್ಪಿಸಲಾಗಿಲ್ಲ. ಗುಡ್ಡದ ನೀರು ನೇರವಾಗಿ ಹೆದ್ದಾರಿಗೆ ಹರಿಯುವುದು ಹಲವು ವರ್ಷಗಳಿಂದ ಕಂಡುಬರುತ್ತಿದೆ. ಹೊಂಡಗಳಲ್ಲಿ ಮಳೆ ನೀರು ನಿಲ್ಲುವ ವೇಳೆ ವಾಹನ ಸವಾರಿ ಅಪಾಯಕಾರಿ. ಕಳೆದ ವರ್ಷ ಬಿ.ಸಿ.ರೋಡಿನಿಂದ ಕಲ್ಲಡ್ಕವರೆಗೆ ಹೆದ್ದಾರಿ ಅಧೋಗತಿಯಲ್ಲಿತ್ತು.  ಈ ಬಾರಿ ವಾಹನ ಸಂಚಾರ ಇಳಿಮುಖವಾಗಿದ್ದರೂ ಧಾರಾಕಾರ ಮಳೆಯಾಗದೇ ಇದ್ದರೂ ರಸ್ತೆಯಲ್ಲಿ ಹೊಂಡ ಕಾಣಿಸಿಕೊಂಡಿರುವುದು ಜನರ ಆಕ್ಷೇಪಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ