ಕೊರೊನಾ ಜಾಗೃತಿ: ಪೊಲೀಸ್ ಠಾಣೆಗಳಲ್ಲಿನ್ನು ಎಸ್.ಒ.ಪಿ. ಮಾದರಿ ಡ್ಯೂಟಿ

ಜಾಹೀರಾತು

ಜಾಹೀರಾತು

ಪಶ್ಚಿಮ ವಲಯ ಐಜಿಪಿ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲೀಗ ಎಸ್.ಒ.ಪಿ. ಮಾದರಿ ಕರ್ತವ್ಯ. ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ. ಠಾಣೆಯಲ್ಲಿ ಐವರು ಸಿಬ್ಬಂದಿಯಷ್ಟೇ ಕರ್ತವ್ಯ. ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್ .ಒ.ಪಿ.) ಜಾರಿಗೆ ಬಂದಿರುವ ಜಿಲ್ಲೆಗಳು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ. ಕೊರೊನಾ ತಡೆ ಹಿನ್ನೆಲೆಯಲ್ಲಿ ಇದೀಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ಕ್ರಮದ ಸರ್ಪಗಾವಲು. ಏನಿದು ಎಸ್.ಒ.ಪಿ?

ಪ್ರತಿಯೊಬ್ಬ ಸಿಬ್ಬಂದಿ ಮನೆಯಿಂದ ಹೊರಟ ತಕ್ಷಣ ಮಾಸ್ಕ್ ಹಾಕಬೇಕು, ಸ್ಯಾನಿಟೈಸರ್ ಬಳಸಬೇಕು, ಸಾರ್ವಜನಿಕರೊಂದಿಗೆ ವ್ಯವಹರಿಸುವಾಗ ಫೇಸ್ ಕವರ್ ಬಳಸಿ, ಸಾಮಾಜಿಕ ಅಂತರದಲ್ಲಿ ವ್ಯವಹರಿಸಬೇಕು, ಪ್ರತಿ ಪೊಲೀಸ್ ಠಾಣೆಯಲ್ಲಿ ಗ್ಲಾಸ್ ಕ್ಯಾಬಿನ್ ಅಳವಡಿಕೆ ಮಾಡಬೇಕು. ಸ್ಪ್ರೇ ಮಾಡಲು ಹ್ಯಾಂಡ್ ಆಪರೇಟರ್ ಪಂಪ್ ಬಳಸಬೇಕು, ಪೊಲೀಸ್ ಸಿಬ್ಬಂದಿ ಆರೋಪಿಗಳ ಬಂಧನ ಕಾರ್ಯಾಚರಣೆ ವೇಳೇ ತಂಡ ರಚಿಸಿ ಆರೋಪಿಗಳೂ ಪಿಪಿಇ ಕಿಟ್ ಧರಿಸಬೇಕು, ಎನ್ 95 ಮಾಸ್ಕ್ ಧರಿಸಬೇಕು, ಗ್ಲೌಸ್ ಹಾಕಿರಬೇಕು ಎಂದು ಸೂಚಿಸಲಾಗಿದೆ. ನಿಯಮ ಪ್ರಕಾರ ಶೇ.30ರಷ್ಟು ಸಿಬ್ಬಂದಿ (ಸೆಂಟ್ರಿ, ಎಸ್ ಎಚ್ ಒ, ರೈಟರ್, ಕಂಪ್ಯೂಟರ್ ಸಿಬ್ಬಂದಿ, ತನಿಖೆಗೆ ಸಹಾಯಕರೊಬ್ಬರು) ಮಾತ್ರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಔಟ್ ಡೋರ್ ಕರ್ತವ್ಯ ನಿರ್ವಹಿಸುವವರು ಠಾಣೆಗೆ ಬರುವಂತಿಲ್ಲ ಎಂಬಿತ್ಯಾದಿ ಮಾರ್ಗದರ್ಶಿ ಸೂತ್ರಗಳನ್ನು ನೀಡಲಾಗಿದೆ. ಈ ಎಲ್ಲ ಸೂಚನೆಗಳನ್ನು ನಾವು ಮೇಲಧಿಕಾರಿಗಳ ಆದೇಶದ ಮೇಲೆ ಪಾಲಿಸುತ್ತಿದ್ದೇವೆ ಎನ್ನುತ್ತಾರೆ ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ಗೌಡ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೊರೊನಾ ಜಾಗೃತಿ: ಪೊಲೀಸ್ ಠಾಣೆಗಳಲ್ಲಿನ್ನು ಎಸ್.ಒ.ಪಿ. ಮಾದರಿ ಡ್ಯೂಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*