ಜಿಲ್ಲಾ ಸುದ್ದಿ

ಮಹಿಳೆಯ ಸರ ಕಸಿದು ಪರಾರಿ

ಜಾಹೀರಾತು

ಮುಲ್ಕಿ ಸಮೀಪದ ಕಾರ್ನಾಡು ಚರಂತಿಪೇಟೆ ಹೆದ್ದಾರಿ ರಸ್ತೆಯ ಬಳಿಯ ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಮಹಿಳೆಯ ಅಂಗಡಿಗೆ ವ್ಯಾಪಾರಕ್ಕೆಂದು ಬಂದ ಯುವಕನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ. ಬುಧವಾರ ಮಧ್ಯಾಹ್ನ ಸ್ಕೂಟರ್ ನಲ್ಲಿ ಮುಲ್ಕಿ ಕಡೆಯಿಂದ ಬಂದ 24 ವರ್ಷ ಪ್ರಾಯದ ಯುವಕನೊಬ್ಬ ಚರಂತಿಪೇಟೆ ಬಳಿಯ ಮಹಿಳೆ ಅಂಗಡಿಯ ಸ್ವಲ್ಪದೂರದಲ್ಲಿ ಸ್ಕೂಟರ್ ನಿಲ್ಲಿಸಿ ಅಂಗಡಿಗೆ ಬಂದು ಬಿಸ್ಕೆಟ್ ಬೇಕು ಎಂದು ಕೇಳಿದ್ದಾನೆ. ಮಹಿಳೆ ಬಿಸ್ಕೆಟ್ ಕೊಡಲು ಕೈ ಚಾಚಿದಾಗ ಯುವಕ ಮಹಿಳೆ ಕುತ್ತಿಗೆಯಲ್ಲಿದ್ದ ಎರಡು ಪವನ್ ತೂಕದ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾನೆ. ಆರೋಪಿ ಯುವಕ ಅಂಗಡಿಯ ಮಾರು ದೂರದಲ್ಲಿ ಸ್ಕೂಟರ್ ಚಾಲೂ ಇರಿಸಿ ಅಂಗಡಿಗೆ ಬಂದಿದ್ದು ವಾಪಸ್ ಮೂಲ್ಕಿ ಕಡೆಗೆ ಪ್ರಯಾಣಿಸಿ ಬಳಿಕ ಹೆದ್ದಾರಿಯಲ್ಲಿ ಮಂಗಳೂರು ಕಡೆಗೆ ಹೋಗಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಮಂಗಳೂರು ಡಿಸಿಪಿ ಕ್ರೈಮ್ ವಿಭಾಗದ ಲಕ್ಷ್ಮಿ ಗಣೇಶ್.ಎಸಿಪಿ ಬೆಳ್ಳಿಯಪ್ಪ. ಮುಲ್ಕಿ ಇನ್ಸ್ಪೆಕ್ಟರ್ ಜಯರಾಮ ಗೌಡ. ಎಸ್ಐ ಶೀತಲ್ ಅಲಗೂರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ