ಪ್ರಮುಖ ಸುದ್ದಿಗಳು

ಮಂಗಳೂರು ತಲುಪಿದ ಕೆಸಿಎಫ್ ಒಮಾನ್ ಚಾರ್ಟಡ್ ಪ್ಲೈಟ್

ಜಾಹೀರಾತು

ಕೋವಿಡ್-19 ಕೊರೋನ ವೈರಸ್ ಹಿನ್ನಲೆ ವಿಮಾನಗಳು ರದ್ದಾಗಿ, ಹಲವಾರು ಕನ್ನಡಿಗರು ಊರಿಗೆ ತೆರಳಲು, ಕೆಲಸವಿಲ್ಲದೆ ಸಂಕಷ್ಟಪಡುತ್ತಿರುವುದನ್ನು ಕಂಡು ಕೆಸಿಎಫ್ ಒಮಾನ್ ಆಯೋಜಕತ್ವದಲ್ಲಿ ಇಂಡಿಗೋ ವಿಮಾನವು ಇಂದು ಮಧ್ಯಾಹ್ನ ಮಂಗಳೂರಿಗೆ ತಲುಪಿತು.

ಕರ್ನಾಟಕ ಕಲ್ಚರಲ್ ಫೌಂಡೇಶನ್ ವತಿಯಿಂದ ಆಯೋಜಿಸಿದ ಚಾರ್ಟಡ್ ವಿಮಾನದಲ್ಲಿ ಅನಾರೋಗ್ಯಕ್ಕೊಳಗಾದವರು, ಗರ್ಭಿಣಿಯರು, ಸಣ್ಣಮಕ್ಕಳು, ವೀಸಾ ಕಾಲಾವದಿ ಮುಗಿದವರು, ಉದ್ಯೋಗ ಕಳೆದು ಕೊಂಡವರು ಇತ್ಯಾದಿ, ವಿಭಿನ್ನ ರೀತಿಯ ಸಂತ್ರಸ್ತರನ್ನೊಳಗೊಂಡ ಪ್ರಯಾಣಿಕರು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದರು.

ಯಾತ್ರೆಯ ನೊಂದಾವಣಿಯಿಂದ ಪ್ರಾರಂಭಿಸಿ, ಅಗತ್ಯ ದಾಖಲೆಗಳು ಮತ್ತು ಪಾಲಿಸ ಬೇಕಾದ ಆರೋಗ್ಯ ಸಂಬಂಧಿತ ಸಂಪೂರ್ಣ ಮಾಹಿತಿಯನ್ನು, ಕೆಸಿಎಫ್ ಪ್ರತೀ ಪ್ರಯಾಣಿಕರಿಗೆ ನೀಡಿತ್ತು. ಪ್ರಯಾಣದ ಸಂದರ್ಭದಲ್ಲಿ ಧರಿಸಬೇಕಾದ ಸಂಪೂರ್ಣ ಸುರಕ್ಷಾ ಕವಚ (PPE kit) ಮತ್ತು ಲಘು ಉಪಹಾರವು ಸಂಘಟನೆಯ ವತಿಯಿಂದ ನೀಡಲಾಗಿತ್ತು.

ತನ್ನ ಪ್ರಯಾಣಿಕರ ಸುರಕ್ಷೆ ಮತ್ತು ಉತ್ತಮ ಸೇವೆಯ ಉದ್ದೇಶವನ್ನಿಟ್ಟುಕೊಂಡು ಪ್ರತೀಯೋರ್ವರೊಂದಿಗೆ ಸಂಘಟನೆಯ ಕಾರ್ಯಕರ್ತರು ನಿರಂತರ ಸಂಪರ್ಕದಲ್ಲಿದ್ದು, ಕ್ವಾರಂಟೈನ್ ಮುಗಿಸಿ ಮನೆ ಸೇರುವ ವರೆಗೂ ಈ ಪ್ರಕ್ರಿಯೆ ಮುಂದುವರಿಯಲಿದೆ. ಕೆಸಿಎಫ್ ಆಯೋಜಿಸಿದ ಚಾರ್ಟರ್ ವಿಮಾನದ ಯಶಸ್ವಿಯಲ್ಲಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್, ಕೇಂದ್ರ ಮತ್ತು ರಾಜ್ಯ ಸರಕಾರಗಳ ಮತ್ತು ಒಮಾನ್ ಭಾರತೀಯ ರಾಯಭಾರ ಕಚೇರಿಯ ಸಹಕಾರವನ್ನು ನೆನಪಿಸಿಕೊಳ್ಳುತ್ತಾ, ಅಗತ್ಯವಿರುವ ಸರ್ಕಾರೀ ಅನುಮತಿಯನ್ನು ಪಡೆಯುವಲ್ಲಿ ಸಹಕರಿಸಿದ, ಕರ್ನಾಟಕ ರಾಜ್ಯ, ಮಂಗಳೂರು ಜಿಲ್ಲಾಧಿಕಾರಿ, ಕರ್ನಾಟಕ ಮುಸ್ಲಿಂ ಜಮಾ ಅತ್, KCF INC ನೇತಾರರು ಹಾಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದೆ.

ಮಳೆಯನ್ನೂ ಲೆಕ್ಕಿಸದೆ, ಲಗೇಜುಗಳನ್ನು ಸ್ವತಃ ಹೆಗಲಮೇಲೇರಿಸಿ, ಹೋಟೆಲ್ ಗಳಿಗೆ ಸಾಗಿಸುವುದರಿಂದ ಹಿಡಿದು ಕ್ವಾರಂಟೈನ್ ಸಮಯದುದ್ದಕ್ಕೂ ಪ್ರಯಾಣಿಕರ ಎಲ್ಲಾ ಅಗತ್ಯತೆಗಳನ್ನು ಕೇಳಿ ತಿಳಿದುಕೊಂಡು ಸೇವಾ ನಿರತರಾಗಿರುವ SSF ಕಾರ್ಯಕರ್ತರನ್ನು ಕೆಸಿಎಫ್ ನೇತಾರರು ಮತ್ತು ಪ್ರಯಾಣಿಕರು ಪ್ರಶಂಸಿಸಿದರು. ಅವಿಶ್ರಾಂತ ಕಾರ್ಯಾಚರಣೆ ಮೂಲಕ ಈ ಧ್ಯೇಯವನ್ನು ಸಾಧಿಸುವಲ್ಲಿ ದುಡಿದ ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಮತ್ತು ವಿಮಾನವು ಮಂಗಳೂರಿಗೆ ತಲುಪಿದೊಡನೆ ಪ್ರಯಾಣಿಕರ ಎಲ್ಲ ರೀತಿಯ ಸೇವೆಗಳ ಉಸ್ತುವಾರಿ ವಹಿಸಿಕೊಂಡು ಸದಾ ಕಾರ್ಯನಿರತರಾಗಿರುವ ರಾಜ್ಯ SYS ಮತ್ತು ಕರ್ನಾಟಕ ಮುಸ್ಲಿಂ ಜಮಾಅತ್ ಗಳ ಎಲ್ಲಾ ನಾಯಕರಿಗೆ ಕೆಸಿಎಫ್ ಒಮಾನ್ ಮನತುಂಬಿ ಅಭಿನಂದನೆ ಸಲ್ಲಿಸುತ್ತಿದೆ ಎಂದು KCF ಒಮಾನ್ ನಾಯಕರು ತಿಳಿಸಿರುತ್ತಾರೆ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts