ಬಂಟ್ವಾಳ ತಾಲೂಕು ಸಹಿತ ದ.ಕ. ಜಿಲ್ಲೆಯಾದ್ಯಂತ ನಾಗರಪಂಚಮಿಯನ್ನು ಸರಳವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ಭಕ್ತರು ಕಂಡುಬರುತ್ತಿದ್ದರೆ, ಈ ವರ್ಷ ಭಕ್ತರು ಮನೆಯಲ್ಲೇ ನಾಗದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿ ಸಹಿತ ಹಲವೆಡೆ ಪೂಜೆಗಳು ನಡೆದವು. ಕೆಲವು ಕುಟುಂಬದವರು ಒಟ್ಟಾಗಿ ಮನೆಯ ನಾಗನಕಟ್ಟೆಯಲ್ಲಿ ಪೂಜೆ ಸಲ್ಲಿಸಿದರು. ಹಾಗೆಯೇ ಸುಬ್ರಹ್ಮಣ್ಯ, ನಾಗ ಸನ್ನಿಧಿ ಕ್ಷೇತ್ರಗಳಲ್ಲಿ ಭಕ್ತರಿಗೆ ಕೋವಿಡ್ ಹಿನ್ನೆಲೆಯಲ್ಲಿ ಪ್ರವೇಶವಿರದೆ, ಸರಳವಾಗಿ ನಾಗರಪಂಚಮಿ ಹಬ್ಬವನ್ನು ಆಚರಿಸಲಾಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…