ಬಂಟ್ವಾಳ

ರಾಯಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಂದಿರ ನಿರ್ಮಾಣ: ಸಮಾಲೋಚನಾ ಸಭೆ

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ತತ್ವದೊಂದಿಗೆ ಶ್ರೀ ನಾರಾಯಣಗುರುಗಳ ಕೇರಳದ ಶಿವಗಿರಿಯಲ್ಲಿ ಸ್ಥಾಪನೆ ಮಾಡಿದ ದೇವಸ್ಥಾನ ಮಾದರಿಯಲ್ಲಿ ಬಂಟ್ವಾಳ ತಾಲೂಕಿನ ರಾಯಿಯಲ್ಲಿ ನಾರಾಯಣಗುರು ಮಂದಿರ ತಲೆಯೆತ್ತಲಿದೆ. ಸುಮಾರು 2 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನೂತನ ಗುರುಮಂದಿರ, ಸಮುದಾಯ ಭವನ ನಿರ್ಮಾಣವಾಗಲಿದ್ದು, ಈಗಾಗಲೇ ಶಿಲಾನ್ಯಾಸ ನೆರವೇರಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ದಿನಂಪ್ರತಿ ಕರಸೇವಕರು ನಿರಂತರ ಸೇವೆಯಲ್ಲಿ ತೊಡಿಸಿಕೊಂಡಿದ್ದಾರೆ. ಗುರುಮಂದಿರ ನಿರ್ಮಾಣದ ಮುಂದಿನ ಕಾರ್ಯ ಯೋಜನೆ, ಗ್ರಾಮದ ಸದಸ್ಯರ ಕರಸೇವೆ ಕುರಿತು ರಾಯಿ, ಕೊಲ, ಅರಳ ಗ್ರಾಮದ ಗ್ರಾಮಸ್ಥರ ಸರಣಿ ಸಭೆ ಜುಲೈ 26ರಂದು ಅಂಚನ್ ಗಾರ್ಮೆಂಟ್ ಮಾಲೀಕ ಪ್ರಕಾಶ್ ಅಂಚನ್ ಗೌರವ ಉಪಸ್ಥಿತಿಯಲ್ಲಿ ಸಂಘದ ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆಗುತ್ತು ಅಧ್ಯಕ್ಷತೆಯಲ್ಲಿ ನಡೆಯಿತು. ಗುರುಮಂದಿರ, ಸಭಾಂಗಣ ನಿರ್ಮಾಣದ ಮುಂದಿನ ಕಾರ್ಯ ಯೋಜನೆಗಳೇನು ಎಂಬುದರ ಬಗ್ಗೆ ಸಮಾಲೋಚನೆ ನಡೆಯಿತು.

ಜಾಹೀರಾತು

ಎಲ್ಲಾ ಸಮಾಜದವರ ಸಹಕಾರದ ಜೊತೆಜೊತೆಗೆ ಮಂದಿರ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಯಿತು. ಈಗಾಗಲೇ ಅನೇಕ ಮಂದಿ ಕರಸೇವಕರು ದಿನಂಪ್ರತಿ ಕರಸೇವೆಯಲ್ಲಿ ತೊಡಗಿಕೊಂಡಿದ್ದು, ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳಿಗೆ ಜಾತಿ ಮತ ಭೇದವಿಲ್ಲದೆ ಕರೆಸೇವೆಗೆ ಅವಕಾಶ ಕಲ್ಪಿಸುವ ಬಗ್ಗೆ ಸಮಾಲೋಚನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಪ್ರತಿಯೊಬ್ಬ ಮನದಿಚ್ಛೆಯಂತೆ ಮಂದಿರದಲ್ಲಿ ತಮ್ಮ ಪಾಲು ಇರಲಿ ಎನ್ನುವ ಸಂಕಲ್ಪದೊಂದಿಗೆ ಒಂದು ಕಲ್ಲಿನ ಬಾಬ್ತು 50 ರೂಪಾಯಿಯ ರಶೀದಿ ಪಡೆದು ಗುರುಗಳ ಸೇವೆಯಲ್ಲಿ ತೊಡಗಲು ಅವಕಾಶ ಕಲ್ಪಿಸುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ