ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಮೂಲತಃ ತೀರ್ಥಹಳ್ಳಿಯ ಡಾ. ರಾಜೇಂದ್ರ ಕೆ.ವಿ. ನೇಮಕಗೊಂಡಿದ್ದು, ಸಿಂಧೂ ರೂಪೇಶ್ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ದಾವಣಗೆರೆಯಲ್ಲಿ ವೈದ್ಯ ಶಿಕ್ಷಣ ಪೂರೈಸಿದ ಡಾ. ರಾಜೇಂದ್ರ ಐಎಎಸ್ ನಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ. 2013ರಲ್ಲಿ ಐಎಎಸ್ ಅಧಿಕಾರಿಯಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಕಾರ್ಯದರ್ಶಿಯಾಗಿ, ಭಾರತೀಯ ರೈಲ್ವೆಯ ವೈದ್ಯಕೀಯ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿದ್ದ ಅವರು, 2016ರಲ್ಲಿ ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದರು. ಬಳಿಕ ಬೆಳಗಾವಿಯ ಜಿಪಂ ಸಿಇಒ ಆಗಿ ಕರ್ತವ್ಯ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ. ರಾಜೇಂದ್ರ ಅವರು ಜಿಲ್ಲೆಗೆ ಹೊಸಬರಲ್ಲದ ಕಾರಣ ಇಲ್ಲಿನ ಸ್ಥಿತಿಗತಿಯ ಅರಿವು ಅವರಿಗೆ ಚೆನ್ನಾಗಿ ಪರಿಚಯವಿದೆ. ಅದರಲ್ಲೂ ಗ್ರಾಮೀಣ ಭಾಗದ ಅರಿವು ಅವರಿಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿರೀಕ್ಷೆ ಅವರಿಂದ ಇದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹೊಸ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಜಿಲ್ಲೆಗೆ ಹೊಸಬರಲ್ಲ"
Be the first to comment on "ಹೊಸ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಜಿಲ್ಲೆಗೆ ಹೊಸಬರಲ್ಲ"