ಜೀಪಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ತಂಡವನ್ನು ಪತ್ತೆ ಹಚ್ಚಿದ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ಒಬ್ಬ ಆರೋಪಿ, ದನ, ಹಾಗೂ ವಾಹನವನ್ನು ವಶಪಡಿಸಿಕೊಂಡ ಘಟನೆ ಇಡ್ಕಿದು ಗ್ರಾಮದಲ್ಲಿ ನಡೆದಿದೆ. ಇಡ್ಕಿದು ಗ್ರಾಮದ ಮಿತ್ತೂರು ಬರ್ಕೊಡಿ ಏಮಾಜೆ ನಿವಾಸಿ ಪದ್ಮನಾಭ ಗೌಡ (42) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ಮಿತ್ತೂರು ನಿವಾಸಿ ಹಂಝ ಎಂಬಾತ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿ ಜೀಪಿನಲ್ಲಿ ಜಾನುವಾರನ್ನು ಸಾಗಾಟ ಮಾಡುತ್ತಾರೆಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಎಸೈ ಮತ್ತು ಸಿಬ್ಬಂದಿಗಳು ತೆರಳಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದನ ಅಕ್ರಮ ಸಾಗಾಟ ಪತ್ತೆ: ಆರೋಪಿ ವಿಟ್ಲ ಪೊಲೀಸ್ ವಶಕ್ಕೆ"