ಮೆಲ್ಕಾರ್ ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ವತಿಯಿಂದ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶ್ರೀ ಗುರು ಸೊಸೈಟಿ ಉಪಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಅವರನ್ನು ಶನಿವಾರ ಬಿರ್ವ ಸೆಂಟರಿನಲ್ಲಿ ಅಭಿನಂದಿಸಲಾಯಿತು. ಸೊಸೈಟಿ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ ಅಭಿನಂದನಾ ಭಾಷಣ ಮಾಡಿದರು. ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಮಾತನಾಡಿ ಶುಭ ಹಾರೈಸಿದರು. ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ, ಶ್ರೀ ಗುರು ಸೊಸೈಟಿ ನಿರ್ದೇಶಕ ಕೆ.ಸಂಜೀವ ಪೂಜಾರಿ ಬೊಳ್ಳಾಯಿ ಸ್ವಾಗತಿಸಿ,ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿರ್ದೇಶಕರಾದ ನಾರಾಯಣ ಪೂಜಾರಿ ಬೊಲ್ಲುಕಲ್ಲು, ರತ್ನಾಕರ ಪೂಜಾರಿ ಮೆಲ್ಕಾರ್, ಉಮೇಶ ಸುವರ್ಣ ತುಂಬೆ, ಸಂತೋಷ್ ಕುಮಾರ್ ಕೊಟ್ಟಿಂಜ, ಪುಷ್ಪಾವತಿ ಕೊಲ್ಯ, ತುಳಸಿ ಇರಾ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಉಪಸ್ಥಿತರಿದ್ದರು. ನಿರ್ದೇಶಕರಾದ ರಮೇಶ ಅನ್ನಪ್ಪಾಡಿ ಸನ್ಮಾನ ಪತ್ರ ವಾಚಿಸಿದರು. ರತ್ನಾಕರ ಪೂಜಾರಿ ನಾಡಾರು ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಮತ್ತು ಗಿರೀಶ್ ಪೆರ್ವ ಕಾರ್ಯಕ್ರಮ ನಿರೂಪಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…