ಕಲ್ಲಡ್ಕ ರಾಮ ಮಂದಿರದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಮೊದಲ ಹಂತ ಸಮಾರೋಪ

ಜಾಹೀರಾತು

ಜಾಹೀರಾತು

ಬಂಟ್ವಾಳ: ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ದ.ಕ.ಜಿಲ್ಲಾ  ಸಹಕಾರ ಭಾರತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇವರ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ ಉದ್ಯೋಗ ನೈಪುಣ್ಯ ತರಬೇತಿಯ ಮೊದಲ ಹಂತದ 3 ವಿಷಯಗಳ ಸಮಾರೋಪ  ಸಮಾರಂಭ  ಶ್ರೀರಾಮ ಮಂದಿರದ ಮಾಧವ ಸಭಾಭವನದಲ್ಲಿ ಆಗಸ್ಟ್ 1, ಶನಿವಾರ  ಸಂಜೆ ನಡೆಯಿತು.

ಹೈನುಗಾರಿಕೆ, ಕೃಷಿಯಂತ್ರೋಪಕರಣ ಬಳಕೆ ಮತ್ತು ದುರಸ್ತಿ ಹಾಗೂ ಪ್ಯಾಬ್ರಿಕೇಶನ್ ಮತ್ತು ವೆಲ್ಡಿಂಗ್ ಈ ಮೂರು ವಿಷಯಗಳ ಬಗ್ಗೆ  ಪ್ರಾತ್ಯಕ್ಷಿಕೆ ಮತ್ತು ತರಬೇತಿ  ಕಾರ್ಯಕ್ರಮದಲ್ಲಿ  ತರಬೇತಿ ಪಡೆದ 35 ಜನರಿಗೆ ವಿವೇಕಾನಂದ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಮಾಣ ಪತ್ರವನ್ನು ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಜಾಹೀರಾತು

ಅಧ್ಯಕ್ಷತೆಯನ್ನು ಪುತ್ತೂರು ಜಿಲ್ಲಾ ಸಂಘಚಾಲಕರಾದ ಕೊಡ್ಮಣ್ ಕಾಂತಪ್ಪ ಶೆಟ್ಟಿ ವಹಿಸಿದ್ದರು. ಪರಿವರ್ತನೆಯ ಕಾಲಘಟ್ಟದಲ್ಲಿ, ದೇಶದ ಪರಮವೈಭವದ ಶಿಲ್ಪಿಗಳು ನಾವಾಗಬೇಕು. ಆ ದಿಕ್ಕಿನಲ್ಲಿ ದೇಶದಲ್ಲೇ ಮೊದಲ ಶಿಬಿರ ಇದು ಎಂದರು. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಅಧ್ಯಕ್ಷರಾದ ಪ್ರಸನ್ನ ಭಟ್ ಬಲ್ನಾಡು, ಶಿಕ್ಷಣ ಕೇವಲ ಪುಸ್ತಕದ ಓದಿನಿಂದ ಬರುವುದಲ್ಲ, ಕೃಷಿಯಿಂದ ಬದುಕನ್ನು ಕಟ್ಟಿಕೊಂಡವರು ಹಳ್ಳಿಗಳನ್ನು ಸುಸಂಪನ್ನಗೊಳಿಸಬೇಕು ಎಂದರು.

ಸಹಕಾರ ಭಾರತಿಯ ತಾಲೂಕು ಕಾರ್ಯದರ್ಶಿ ವಿಶ್ವನಾಥ ಮುರಬೈಲ್ ಮಾತನಾಡಿ, ನಾವು ಕೇವಲ ಉದ್ಯೋಗಿಗಳಾಗದೆ, ಉದ್ಯಮಿಗಳಾಗಬೇಕು, ಮುಂದಿನ ಹಂತದ ತರಬೇತಿ ಗಳಿಗೂ ಆಸಕ್ತರನ್ನು ಜೋಡಿಸಬೇಕು ಎಂದರು. ವಿದ್ಯಾಭಾರತಿಯ ಪ್ರಾಂತ ಕಾಲೇಜ್ ಶಿಕ್ಷಣ ಪ್ರಮುಖ್ ಕೃಷ್ಣಪ್ರಸಾದ್ ತರಬೇತಿ ಶಿಬಿರದ ಮುಕ್ತಾಯದೊಂದಿಗೆ ಕೆಲಸದ ಆರಂಭ ಆಗಿದೆ. ಇಲ್ಲಿ ಕಲಿತ ನೈಪುಣ್ಯದ ಅನುಷ್ಠಾನ ಆಗಬೇಕು. ಮುಂದಿನ ವರ್ಷ ನಾವೇ ಶಿಕ್ಷಕರಾಗಬೇಕು. ಸಂಘಟನೆಯ ಜೊತೆ ಜೋಡಿ ಕೊಂಡರೆ ಯಶಸ್ಸು ಸಾಧ್ಯ ಎಂದು ತಮ್ಮ ಆಶಯನುಡಿಯಲ್ಲಿ ತಿಳಿಸಿದರು ಗಜೇಶ್ ಅಮ್ಟೂರು ಸ್ವಾಗತಿಸಿದರು. ಜಗದೀಶ ಮಾರಮಜಲು ವಂದಿಸಿದರು. ಜಿನ್ನಪ್ಪ ಕುದ್ರೆಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಆದಿತ್ಯ ನೆಟ್ಲ ಆಶಯಗೀತೆ ಹಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ರಾಮ ಮಂದಿರದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಮೊದಲ ಹಂತ ಸಮಾರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*