ವಿಟ್ಲ

ಶ್ರೀರಾಮ ಮಂದಿರ ನಿರ್ಮಾಣ; ಧರ್ಮದ ಪುನರುತ್ಥಾನ, ಮನೆ ಮನಗಳಲ್ಲಿ ಶ್ರೀರಾಮಜ್ಯೋತಿ ಬೆಳಗಿಸೋಣ: ಒಡಿಯೂರು ಶ್ರೀಗಳು

ಜಾಹೀರಾತು

ಬಂಟ್ವಾಳ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿರುವುದು, ರಾಮಭಕ್ತರ ಅರ್ಥಾತ್ ಪ್ರಜ್ಞಾವಂತ ಪ್ರಜೆಗಳ ಕನಸು ನನಸಾಗುವ ಸಮಯ ಒದಗಿಬಂದಿರುವುದು ಸಂತಸದ ವಿಚಾರ ಎಂದು ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.

ಭಾರತೀಯ ಪರಂಪರೆಯಲ್ಲಿ ರಾಮಾಯಣಮಹಾಭಾರತ ಸಂಸ್ಕೃತಿಯ ಕಣ್ಣುಗಳಿದ್ದಂತೆ. ’ರಾಮಎನ್ನುವ ಎರಡಕ್ಷರವೇ ಅದ್ಭುತವಾದುದು. ಪರಿಶುದ್ಧವಾದ ಆಕಾಶ, ಅಗ್ನಿ, ವಾಯು ತತ್ತ್ವಗಳ ಚಿಂತನೆಯು ಅಡಗಿರುವುದಲ್ಲದೆ ಪಂಚಭೂತಾತ್ಮಗಳ ಸರ್ವಸ್ವವೂ ಇದರಲ್ಲಿದೆ. ಸುಲಲಿತವಾಗಿರಾಮಎನ್ನಲು ಅನುಕೂಲವಾದುದು. ಮಂತ್ರ ಮಂತ್ರ ಜಪಿಸಿ ನೀ ಕೆಡಬೇಡ, ರಾಮ ಮಂತ್ರವ ಜಪಿಸೋ…’ ಎಂದು ದಾಸರು ಕೊಂಡಾಡಿದ್ದಾರೆ. ಸಾಕ್ಷಾತ್ ಶಿವನೇ ತನ್ನ ಭಾಮೆ ಶಿವೆಗೆ ರಾಮ ಮಂತ್ರವನ್ನು ಬೋಧಿಸಿದನು. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವೆಂದರೆ ಧರ್ಮದ ಪುನರುತ್ಥಾನಕ್ಕೆ ನಾಂದಿಯೇ ಸರಿ. ತತ್ಸಂಬಂಧ ತಾವೆಲ್ಲರೂ ಮನೆಮನಗಳಲ್ಲಿ ಶ್ರೀರಾಮಜ್ಯೋತಿಯನ್ನು ಬೆಳಗಿಸೋಣ. ಸತ್ಸಂಕಲ್ಪವನ್ನು ಮಾಡೋಣ. ಶೀಘ್ರವಾಗಿ ರಾಮ ಮಂದಿರ ನಿರ್ಮಾಣಗೊಂಡು ವಿಶ್ವಕ್ಕೆ ಮಾದರಿಯಾಗಲಿ. ಪ್ರಧಾನಮಂತ್ರಿಗಳಾದ ಮೋದಿಜಿಯವರ ಮೂಲಕ ಸುಮುಹೂರ್ತದಲ್ಲಿ ಶಿಲಾನ್ಯಾಸ ನಡೆಯುವುದು ಅರ್ಥಪೂರ್ಣವಾಗಿದೆ. ರಾಮಪ್ರೇಮವೆಂದರೆ ಅದು ರಾಷ್ಟ್ರಪ್ರೇಮವೇ ಸರಿ. ರಾಮತತ್ತ್ವದಲ್ಲಿ ರಾಷ್ಟ್ರೀಯತೆಯನ್ನು ಬೆಳಗುವ ಶಕ್ತಿಯಿದೆ. ಅಧ್ಯಾತ್ಮದ ಅಂದವಿದೆ. ನಾವೆಲ್ಲರೂ ಮಂದಿರ ನಿರ್ಮಾಣಕ್ಕೆ ಕೈಲಾದ ಸೇವೆಯನ್ನು ಆತ್ಮಾರ್ಥವಾಗಿ ಸಲ್ಲಿಸೋಣ. ಆತ್ಮಜ್ಞಾನಕ್ಕೆ ಇನ್ನೊಂದು ಹೆಸರಾದ ಆಂಜನೇಯನ ಅನುಗ್ರಹ ಜೊತೆಗಿರುವಾಗ ಎಲ್ಲವೂ ನಿರ್ವಿಘ್ನವಾಗಿ, ಸಾಂಗವಾಗಿ ನಡೆಯಲೆಂದು ಹಾರೈಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts