ಜಿಲ್ಲಾ ಸುದ್ದಿ

ವಸತಿ ಯೋಜನೆ: ನಿಗದಿತ ಮಿತಿಯೊಳಗೆ ಮಾಹಿತಿ ನೀಡಿ – ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಜಾಹೀರಾತು

ನಿವೇಶನ ರಹಿತರಿಗೆ ಸೂರು ಒದಗಿಸುವುದು ಕೇಂದ್ರದ ವಸತಿ ಯೋಜನೆಯ ಉದ್ದೇಶವಾಗಿದ್ದು, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಜಾಗವನ್ನು ಗುರುತಿಸಿ ನಿಗದಿತ ಕಾಲಮಿತಿಯೊಳಗೆ ಸಂಬಂಧಪಟ್ಟ ಅಧಿಕಾರಿಗಳು ಪೂರ್ಣ ಮಾಹಿತಿ ನೀಡಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಕುಮಾರ್ ಸೂಚಿಸಿದರು.

ಡಾ. ರಾಜೇಂದ್ರ ಕೆ.ವಿ.

ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ  ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರಿಗಳು ಪ್ರತಿಯೊಂದು ಕೆಲಸದಲ್ಲಿ ವಿಶೇಷ ಕಾಳಜಿ ವಹಿಸಿ ಜನರ ಸಮಸ್ಯೆಗಳಿಗನುಣವಾಗಿ  ವಾಸ್ತವಕ್ಕೆ ಪೂರಕವಾಗುವಂತೆ ಕೆಲಸ ಮಾಡಬೇಕು ಎಂದು ಹೇಳಿದರು.

ವಸತಿ ಸಂಕೀರ್ಣ, ಫ್ಲಾಟ್, ಕಟ್ಟಡಗಳು ಹಾಗೂ ಕಾಂಪ್ಲೆಕ್ಸ್‍ಗಳು ಕಡ್ಡಾಯವಾಗಿ ತ್ಯಾಜ್ಯ ವಿಲೇವಾರಿ ಸಂಸ್ಕರಣೆಯ ಘಟಕವನ್ನು ಒಳಗೊಂಡಿರಬೇಕು. ಇಂತಹ ವ್ಯವಸ್ಥೆಯನ್ನು ಒಳಗೊಂಡಿರುವ ಕಟ್ಟಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ರಾಜೇಂದ್ರ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯು ಕೇಂದ್ರದ ಸಾಕಷ್ಟು ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ಜೊತೆಗೆ ಸೂಕ್ತ ತರಬೇತಿ ನೀಡಬೇಕು ಎಂದರು.
ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ ಕೋಟ್ಯಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸೆಲ್ವಮಣಿಆರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts