ಬಂಟ್ವಾಳ

ವ್ಯಾಪಕ ಮಳೆ: ಬಂಟ್ವಾಳ ತಾಲೂಕಿನ ಹಲವು ಮನೆಗಳಿಗೆ ಹಾನಿ, ಉರುಳಿದ ಮರಗಳು

ಜಾಹೀರಾತು

ಮಂಗಳವಾರ ರಾತ್ರಿಯಿಂದೀಚೆಗೆ ಸುರಿದ ಭಾರಿ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿಗಳು ಸಂಭವಿಸಿವೆ. ಸಜಿಪನಡು ಗ್ರಾಮದ ಕುಂಜತ್ತಬೈಲು ಎಂಬಲ್ಲಿ ಕರಿಯಪ್ಪ ನಾಯ್ಕ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ನರಿಕೊಂಬು ಗ್ರಾಮದ ದೋಟ ಎಂಬಲ್ಲಿ ದೇವಕಿ ಎಂಬವರ ಮನೆ ಹಾನಿಯಾಗಿದೆ. ರಾಯಿ ಹೇಮಚಂದ್ರ ಶೆಟ್ಟಿಗಾರ್ ಎಂಬವರ ಅಂಗಡಿ ಮತ್ತು ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಚಿ ಗ್ರಾಮದ ಚಂದ್ರಹಾಸ ಎಂಬವರ ಮನೆಗೆ ಹಾನಿಯಾಗಿದೆ. ಸಜಿಪನಡು ಗ್ರಾಮದ ವೆಂಕಟೇಶ್ವರ ಭಟ್ ಅವರ 100 ಅಡಿಕೆ ಮರ ಹಾಗೂ 20 ಬಾಳೆ ಗಿಡಗಳು ಮುರಿದುಬಿದ್ದಿವೆ. ವಿಟ್ಲಪಡ್ನೂರು ಗ್ರಾಮದ ಎಸ್. ನಾರಾಯಣ ಭಟ್ ಮನೆಯ ಮೇಲ್ಛಾವಣಿಯ ಶೀಟುಗಳು ಕಳಚಿಬಿದ್ದಿವೆ. ಬಿಳಿಯೂರು ಗ್ರಾಮದ ಇಸ್ಮಾಯಿಲ್ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಪೆರ್ನೆ ಗ್ರಾಮದ ಇಬ್ರಾಹಿಂ ಖಲೀಲ್ ಮನೆ, ವಿಟ್ಲ ಕಸ್ಬಾ ಗ್ರಾಮದ ಲಕ್ಷ್ಮೀ ಎಂಬವರ ಮನೆ, ಬಾಳ್ತಿಲ ಗ್ರಾಮದ ಪದ್ಮನಾಭ ಅವರ ಮನೆ, ಇಡ್ಕಿದು ಗ್ರಾಮದ ಚಿಕ್ಕಮ್ಮ ಎಂಬವರ ಮನೆ, ಅನಂತಾಡಿ ಗ್ರಾಮದ ಲೋಕಯ್ಯ ಅವರ ಮನೆಗೆ ಹಾನಿಯಾಗಿದೆ. ಬಾಳ್ತಿಲ ಗ್ರಾಮದ ಮೀನಾಕ್ಷಿ ಮನೆಗೆ ಮರ ಬಿದ್ದು ಹಾನಿಯಾಗಿದೆ. ಪುಣಚ ಗ್ರಾಮದ ರತ್ನ ಅವರ ಮನೆಗೆ ಬರೆ ಜರಿದು ಹಾನಿಯಾಗಿದೆ ಎಂದು ಬಂಟ್ವಾಳ ತಾಲೂಕು ಕಚೇರಿ ಮಾಹಿತಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ