ಬಂಟ್ವಾಳ

ಕೆದಿಲ ಶ್ರೀದೇವಿ ಭಜನಾ ಮಂದಿರದಲ್ಲಿ ಸಂಭ್ರಮಾಚರಣೆ

ಬಂಟ್ವಾಳ: ಕೆದಿಲದ ಶ್ರೀ ದೇವೀ ಭಜನಾ ಮಂಡಳಿ ಹಾಗೂ ಧರ್ಮಶ್ರೀ ವಿಶ್ವಸ್ಥ ಮಂಡಳಿ(ರಿ) ವತಿಯಿಂದ ಅಯೋಧ್ಯೆ ರಾಮಮಂದಿರ ಭೂಮಿಪೂಜೆ ಸಂಭ್ರಮಾಚರಣೆಯನ್ನು ಗಾಂಧಿನಗರದ ಶ್ರೀದೇವಿ ಭಜನಾ ಮಂದಿರದಲ್ಲಿ ಆಚರಿಸಲಾಯಿತು.

ಜಾಹೀರಾತು

ರಾಮನಾಮ ತಾರಕ ಮಂತ್ರ ಪಠಣ ಹಾಗೂ 1990ರ  ಸಮಯದಲ್ಲಿ ಕೆದಿಲ ಗ್ರಾಮದಿಂದ ಕರಸೇವಕರಾಗಿ ತೆರಳಿದ ರಾಮ್ ಭಟ್ ಮೈರಾ, ಚೆನ್ನಪ್ಪ ಗೌಡ ಕುದುಮಾನು, ಈಶ್ವರ ಸಪಲ್ಯ ವಾಲ್ತಾಜೆ, ಸುಬ್ರಮಣ್ಯ ಭಟ್ ಬಡೆಕ್ಕಿಲ ಅವರನ್ನು ಗೌರವಿಸಲಾಯಿ. ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ಭಜನಾ ಮಂಡಳಿಯ ಅಧ್ಯಕ್ಷ ಕೃಷ್ಣಪ್ಪ  ಕುಲಾಲ್ ಕಂಪ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಜೆ. ಕೃಷ್ಣ ಭಟ್ ಮಿರಾವನ ಶ್ರೀ ದೇವೀ ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ನಿವೃತ್ತ ಸೈನಿಕ ಜನಾರ್ಧನ ಕುಲಾಲ್ ಗಾಣದಕೊಟ್ಯ,ಪ್ರಮುಖರಾದ ಭೀಮ ಭಟ್ ಮಿರಾವನ, ಮುರಳೀಧರ ಶೆಟ್ಟಿ ಕಲ್ಲಾಜೆ, ಬಾಳಪ್ಪ ಗೌಡ ಕುದುಂಬ್ಲಾಡಿ,ಶ್ರೀಕೃಷ್ಣ ಉಪಾದ್ಯಾಯ, ಶಿವಶಂಕರ ಪುತ್ತೂರಾಯ, ಕಾಂತಪ್ಪ ಗೌಡ ಕೊಳಚಪ್ಪು, ಮಾರಪ್ಪ ಸುವರ್ಣ ಪೆರಮುಗೇರು, ನಾರಾಯಣ ಕುಲಾಲ್ ಗಡಿಯಾರ ಮೊದಲಾದವರು ಭಾಗವಹಿಸಿದ್ದರು. ಉಮೇಶ್ ಗಾಂಧಿನಗರ ಕಾರ್ಯಕ್ರಮ ನಿರೂಪಿಸಿದರು, ಮೋನಪ್ಪ ಗೌಡ ಕುದುಮಾನು ವಂದನಾರ್ಪಣೆ ಮಾಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts