ಅಮ್ಟೂರು: ಅಯೋಧ್ಯೆ ಕರಸೇವಕರಿಗೆ ಸನ್ಮಾನ, ಶ್ರೀರಾಮ ಮಂದಿರ ಶಿಲಾನ್ಯಾಸದ ಸಂಭ್ರಮಾಚರಣೆ

ಬಿಜೆಪಿಯ ಅಮ್ಟೂರು ಗ್ರಾಮ ಸಮಿತಿ ಆಶ್ರಯದಲ್ಲಿ ಅಯೋಧ್ಯೆ ಕರಸೇವಕರಿಗೆ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ನಡೆಯಿತು. ಅಯೋಧ್ಯೆ ಶ್ರೀರಾಮಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕರಸೇವಕರಾಗಿ ದುಡಿದ ಅಮ್ಟೂರು ಗ್ರಾಮದ ಶೀನ ಶೆಟ್ಟಿಗಾರ್ ವಿಶಾಂತಿಕೋಡಿ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು

ಈ ವೇಳೆ ಮಾತನಾಡಿದ ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, 1990ರಲ್ಲಿ ಪುತ್ತೂರಿನ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿದ್ದ ಶೇಖರ್ ನಾರಾವಿ ಹಾಗೂ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನೇತೃತ್ವದಲ್ಲಿ ಕರಸೇವಕರಾಗಿ ಹೊರಟ ತಂಡವು ಕೆಲವೊಂದು ಕಷ್ಟ ಕಾರ್ಪಣ್ಯಗಳನ್ನು ಅನುಭವಿಸಿ ತೆರಳಿತ್ತು. ಅವತ್ತಿನ ಮುಲಾಯಂ ಸರ್ಕಾರ ಈ ತಂಡವನ್ನು ಬಂಧಿಸಿ ಉತ್ತರ ಪ್ರದೇಶದ ಕಾರಾಗೃಹದಲ್ಲಿ ಇರಿಸಿತ್ತು. ಇಂಥ ಮಾನಸಿಕ ಹಿಂಸೆ, ನೋವು ಅನುಭವಿಸಿದ ಶೀನ ಶೆಟ್ಟಿಗಾರ್ ಸಂಕಲ್ಪ ಇಂದು ನೆರವೇರಿದೆ. ಪ್ರಧಾನಿ ಮೋದಿಯವರು ಭೂಮಿಪೂಜೆ ಮಾಡುವ ಮೂಲಕ ಕನಸು ನನಸಾಗಿಸಿದ್ದಾರೆ ಎಂದರು.

ಶ್ರೀಕೃಷ್ಣ ಭಜನಾ ಮಂದಿರ ಅಮ್ಟೂರು, ವಿಶ್ವ ಹಿಂದು ಪರಿಷತ್, ಭಜರಂಗದಳ ವತಿಯಿಂದ ಶ್ರೀರಾಮ ಸಂಕೀರ್ತನೆ ಹಾಗೂ ಪ್ರಾರ್ಥನೆ ನಡೆದವು.

ಕೋರನ ವೈರಸ್ ನಿಂದ ಮುಕ್ತಿಯಾಗಲಿ ಎಂದೂ ಪ್ರಾರ್ಥಿಸಲಾಯಿತು. ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾದ ರಮೇಶ್ ಶೆಟ್ಟಿಗಾರ್, ಅಮ್ಟೂರು ಬೂತ್ ಸಮಿತಿ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಬೈದರಡ್ಕಾ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಪೂವಪ್ಪ ಟೈಲರ್, ನಿಕಟಪೂರ್ವ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಗೋಪಾಲ್ ಪೂಜಾರಿ, 181 ಬೂತ್ ಸಮಿತಿ ಅಧ್ಯಕ್ಷರಾದ ಶ್ರೀಧರ ರಾಯಪ್ಪ ಕೊಡಿ, ರಾಯಪ್ಪ ಕೊಡಿ ಶ್ರೀಕೃಷ್ಣ ಭಜನಾ ಮಂದಿರದ ಅರ್ಚಕರಾದ ಮೋನಪ್ಪ ಆಚಾರ್ಯ ಬಜರಂಗ ದಳದ ಸಂಚಾಲಕರಾದ ಕೌಶಲ್ ಶೆಟ್ಟಿ ಬಾಳಿಕೆ, ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಶೆಟ್ಟಿಗಾರ್, ಕಾರ್ಯದರ್ಶಿಗಳಾದ ಪುರುಷೋತ್ತಮ ಪೂಜಾರಿ ಶಾಂತಿಪಳಿಕೆ ಹಾಗೂ ಜಿತೇಶ್ ಶೆಟ್ಟಿ ಬಾಳಿಕೆ, ಪುರುಷೋತ್ತಮ್ ಟೈಲರ್, ಊರ ಪ್ರಮುಖರಾದ ಮಹಾಬಲ ಕುಲಾಲ್, ಶಂಕರ ಬಟ್ಟೆಹಿತ್ಲು, ದಿವಾಕರ ಪೂಜಾರಿ, ಶಂಕರ್ ಅಂಚನ್,  ತಾರನಾಥ್ ಅಮ್ಟೂರು, ಅನಿಲ್ ಕುಮಾರ್, ಕುಶಾಲಪ್ಪ ಮಾಸ್ಟರ್, ಹರೀಶ್ ಬಟ್ಟೆಹಿತ್ಲು,  ವಿಖ್ಯಾತ್ ಬಾಳಿಕೆ, ಸುರೇಶ್ ಅಮ್ಟೂರು, ನಂದನ್ ರೈ, ಮನೀಶ್ ಕುಮಾರ್, ರಾಜೇಶ್ ಅಮ್ಟೂರು, ಪೃಥ್ವಿ ಶಾಂತಿಪಳಿಕೆ ಜಯಪ್ರಕಾಶ್. ಪವನ್ ಕುಮಾರ್ ಉಪಸ್ಥಿತರಿದ್ದರು

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಮ್ಟೂರು: ಅಯೋಧ್ಯೆ ಕರಸೇವಕರಿಗೆ ಸನ್ಮಾನ, ಶ್ರೀರಾಮ ಮಂದಿರ ಶಿಲಾನ್ಯಾಸದ ಸಂಭ್ರಮಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*