ಬಂಟ್ವಾಳ ತಾಲೂಕು ಪಂಚಾಯಿತಿಯ ಕನ್ಯಾನ ಕ್ಷೇತ್ರವನ್ನು ಪ್ರತಿನಿಧಿಸುವ ಸದಸ್ಯ ಕುಮಾರ ಭಟ್ ಬದಿಕೋಡಿ ಅವರಿಗೆ ಕೋವಿಡ್ ಸೋಂಕು ತಗಲಿದೆ. ಬುಧವಾರ ಈ ಕುರಿತು ವರದಿ ಬಂದಿದ್ದು, ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಗ್ರಾಮದಲ್ಲಿ ಜನಪ್ರತಿನಿಧಿಗಳು ಯಾರೂ ಇಲ್ಲದ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯನ ನೆಲೆಯಲ್ಲಿ ಗ್ರಾಮಸ್ಥರಿಗೆ ಸ್ಪಂದಿಸಬೇಕಾದ ಸಂದರ್ಭಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್ 19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ಹೀಗಾಗಿ ಕಳೆದ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗರೂಕತೆ ವಹಿಸಿ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕನ್ಯಾನ ತಾಪಂ ಸದಸ್ಯ ಕುಮಾರ ಭಟ್ ಬದಿಕೋಡಿ ಅವರಿಗೆ ಕೊರೊನಾ ಸೋಂಕು, ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗುವಂತೆ ಮನವಿ"
Be the first to comment on "ಕನ್ಯಾನ ತಾಪಂ ಸದಸ್ಯ ಕುಮಾರ ಭಟ್ ಬದಿಕೋಡಿ ಅವರಿಗೆ ಕೊರೊನಾ ಸೋಂಕು, ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗುವಂತೆ ಮನವಿ"