ದಕ್ಷಿಣ ಕನ್ನಡ ಜಿಲ್ಲೆ: ಮಳೆಗೆ ವೇಗ, ಅಣೆಕಟ್ಟಿನಲ್ಲಿ ಜಲಸಮೃದ್ಧಿ, ನದಿ ನೀರ ಮಟ್ಟ ಹೆಚ್ಚಳ

ತುಂಬೆ ಅಣೆಕಟ್ಟು – ಆಗಸ್ಟ್ 6, 2020

ತುಂಬೆ ಅಣೆಕಟ್ಟು ಆಗಸ್ಟ್ 10, 2019

ಜಾಹೀರಾತು

ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ಎನಿಸಿದ ನೇತ್ರಾವತಿ ಸಹಿತ ಕುಮಾರಧಾರಾ, ಗುಂಡ್ಯ ಹೊಳೆಗಳಲ್ಲಿ ನೀರು ಹೆಚ್ಚಾಗಿದ್ದು, ಅಣೆಕಟ್ಟುಗಳಲ್ಲಿ ಸಮೃದ್ಧ ನೀರ ಹರಿವು ಕಾಣಿಸುತ್ತಿದೆ. ಗುರುವಾರ ಬೆಳಗ್ಗಿನ ವರದಿಯಂತೆ ಬಂಟ್ವಾಳದಲ್ಲಿ ನೇತ್ರಾವತಿ 7.6 ಮೀಟರ್ (ಅಪಾಯದ ಮಟ್ಟ 8.5 ಮೀ.), ಉಪ್ಪಿನಂಗಡಿಯಲ್ಲಿ ನೇತ್ರಾವತಿ  29 ಮೀಟರ್ (ಅಪಾಯದ ಮಟ್ಟ 31.5 ಮೀಟರ್), ಉಪ್ಪಿನಂಗಡಿಯಲ್ಲಿ ಕುಮಾರಧಾರಾ 24 ಮೀಟರ್ (ಅಪಾಯದ ಮಟ್ಟ 26.5 ಮೀ.) ಎತ್ತರದಲ್ಲಿ ಹರಿಯುತ್ತಿದ್ದರೆ, ಗುಂಡ್ಯ ಹೊಳೆ 4.7 ಮೀಟರ್ (ಅಪಾಯದ ಮಟ್ಟ 5 ಮೀಟರ್) ಎತ್ತರದಲ್ಲಿ ಹರಿಯುತ್ತಿದೆ. ಇನ್ನು ನೀರಕಟ್ಟೆಯ ಸಾಗರ್ ಡ್ಯಾಂನಲ್ಲಿ 34 ಮೀಟರ್ ನಷ್ಟು ನೀರು ಸಂಗ್ರಹವಿದ್ದು (ಗರಿಷ್ಠ 38 ಮೀಟರ್), ಕಡಬದ ದಿಶಾ ಡ್ಯಾಂನಲ್ಲಿ 4.7 ಮೀಟರ್ (ಗರಿಷ್ಠ 5 ಮೀಟರ್) ಇದ್ದರೆ, ಶಂಭೂರಿನ ಎಎಂಆರ್ ಡ್ಯಾಂನಲ್ಲಿ 18.9 ಮೀಟರ್ (ಗರಿಷ್ಠ 18.9 ಮೀ.) ನೀರು ಸಂಗ್ರಹವಿದೆ. ಶಂಭೂರು ಡ್ಯಾಂನ 8 ಗೇಟ್ ಗಳನ್ನು ಶೇ.50ರಷಟು ಹಾಗೂ 1 ಗೇಟ್ ಅನ್ನು ಶೇ 40ರಷ್ಟು ತೆರೆಯಲಾಗಿದೆ. ಮಂಗಳೂರಿಗೆ ನೀರು ಸರಬರಾಜು ಮಾಡುವ ತುಂಬೆ ಡ್ಯಾಂನಲ್ಲಿ 6.4 ಮೀಟರ್ (ಗರಿಷ್ಠ 7 ಮೀ) ನೀರು ಸಂಗ್ರಹವಿದ್ದು, ಇಲ್ಲಿರುವ ಎಲ್ಲ ಗೇಟ್ ಗಳನ್ನು ತೆರೆಯಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಮಳೆ ಕಡಿಮೆ ಹಾಗೂ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಸಂಗ್ರಹವಾಗಿದೆ. ಕಳೆದ ವರ್ಷ ತುಂಬೆ ಡ್ಯಾಂನಲ್ಲಿ 10 ಮೀಟರ್ ನೀರು ಹರಿದಿದ್ದರೆ, ಈ ವರ್ಷ 6.5 ಮೀಟರ್ ನೀರು ಸಂಗ್ರಹವಿದೆ. ಆದರೆ ಘಟ್ಟ ಪ್ರದೇಶದಲ್ಲಿ ಮಳೆ ಬಂದರೆ ಇದು ಹೆಚ್ಚಾಗುವ ಸಂಭವವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Be the first to comment on "ದಕ್ಷಿಣ ಕನ್ನಡ ಜಿಲ್ಲೆ: ಮಳೆಗೆ ವೇಗ, ಅಣೆಕಟ್ಟಿನಲ್ಲಿ ಜಲಸಮೃದ್ಧಿ, ನದಿ ನೀರ ಮಟ್ಟ ಹೆಚ್ಚಳ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*