ಭಾರಿ ಮಳೆಗೆ ಅಂಗನವಾಡಿ ಕೇಂದ್ರಕ್ಕೆ ಹಾನಿ

ಕಳೆದೆರಡು ದಿನಗಳಿಂದ ಗಾಳಿ ಮತ್ತು ಸುರಿಯುತ್ತಿರುವ ಧಾರಾಕಾರ ಮಳೆಗೆ  ಕುಕ್ಕಿಪಾಡಿ ಗ್ರಾಮದ ಸಿದ್ಧಕಟ್ಟೆ ಚರ್ಚ್ ಅಂಗನವಾಡಿ ಕೇಂದ್ರದ ಆವರಣ ಗೋಡೆ ಕುಸಿದು ಬಿದ್ದಿದ್ದು, ಮಳೆ ನೀರು ಅಂಗನವಾಡಿ  ಕಟ್ಟಡದ ಒಳಗೆ ನುಗ್ಗಿ ಕಟ್ಟಡದಕ್ಕೂ  ಹಾನಿಯಾಗಿದೆಲ್ಲದೆ ಹಂಚಿನ ಛಾವಣಿಯು ಕುಸಿಯುವ ಹಂತದಲ್ಲಿದೆ.  ಶನಿವಾರ ಮುಂಜಾನೆ ಅಂಗನವಾಡಿ ಕೇಂದ್ರದ ಅವರಣಗೋಡೆ ಕುಸಿದುಬಿದ್ದಿದ್ದು,ಕೇಂದ್ರ ಸಂಪೂರ್ಣಜಲಾವೃತಗೊಂಡು ಕಟ್ಟಡಕ್ಕು ಹಾನಿಯಾಗಿದೆಯಲ್ಲದೆ ಬೀಸಿದ ಗಾಳಿಗೆ ಕೇಂದ್ರದ ಹಂಚಿನ ಛಾವಣಿ ಹಾರಿ,ವಿದ್ಯುತ್ ಕಂಬ ಕೂಡ ಕಟ್ಟಡದ ಮೇಲೆ ವಾಲಿ ನಿಂತಿದ್ದು ಅಪಾಯದಸ್ಥಿತಿಯಲ್ಲಿದೆ.  ಈ ಬಗ್ಗೆ ಸುದ್ದಿ ತಿಳಿದ ಸ್ಥಳೀಯ ತಾಪಂ ಸದಸ್ಯ ಪ್ತಭಾಕರ ಪ್ರಭು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಹೊಸಕಟ್ಟಡ ನಿರ್ಮಾಣ : ಪುಟಾಣಿ ಮಕ್ಕಳ ಹಿತದೃಷ್ಟಿಯಿಂದ ಈ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಿಸಬೇಕಾಗಿದ್ದು, ಈಗಾಗಲೇ  ಈ ಅಂಗನವಾಡಿ ದುರಸ್ಥಿಗಾಗಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ  ಕಾದಿರಿಸಲಾದ 50 ಸಾ.ರೂ.ಅನುದಾನ,ತಾಪಂ ನಿಧಿಯಿಂದ ಸದಸ್ಯರಿಗೆ ಸಿಗುವ 2 ಲಕ್ಷ ರೂ.ವನ್ನು ಈ ಕೇಂದ್ರದ ಕಟ್ಟಡಕ್ಕೆ ವಿನಿಯೋಗಿಸಲಾಗುವುದು,ಈ ಬಗ್ಗೆ ತಾಪಂ ಇಒ ರಾಜಣ್ಣ ಅವರಿಗೆ ಪತ್ರ ನೀಡಲಾಗುವುದು ಎಂದು ತಾಪಂ ಸದಸ್ಯ ಪ್ರಭಾಕರ ಪ್ರಭು ತಿಳಿಸಿದ್ದಾರೆ. ಕಟ್ಟಡದ ಉಳಿಕೆ ಅನುದಾನಕ್ಕೆ ಈಗಾಗಲೇ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರೊಂದಿಗೆ ಚರ್ಚಿಸಿದ್ದು,ಉಳಿದ 5ಲಕ್ಷ ರೂ. ಅನುದಾನವನ್ನು ತಮ್ಮ ಶಾಸಕರ ನಿಧಿಯಿಂದ ಒದಗಿಸಿ ಕೊಡುವ ಭರವಸೆಯನ್ನು ಶಾಸಕ ರಾಜೇಶ್ ನಾಯ್ಕ್ ಅವರು  ನೀಡಿದ್ದಾರೆ ಎಂದು ಪ್ರಭು ತಿಳಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಾರಿ ಮಳೆಗೆ ಅಂಗನವಾಡಿ ಕೇಂದ್ರಕ್ಕೆ ಹಾನಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*