ಆತಂಕ ಮೂಡಿಸಿದ ನೇತ್ರಾವತಿ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಅಪಾರ ಪ್ರಮಾಣದಲ್ಲಿ ಕೃಷಿಗೆ ಹಾನಿ

ಜಾಹೀರಾತು

ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಮತ್ತು ಘಟ್ಟ ಪ್ರದೇಶದಲ್ಲಿ ನದಿ ನೀರಿನ ಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಹರಿಯುವ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿದು ಆತಂಕವನ್ನು ಉಂಟುಮಾಡಿತು. ಎರಡು ದಿನಗಳ ಹಿಂದೆ 6ರಿಂದ 7 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನದಿ ನೀರಿನ ಮಟ್ಟ ಶುಕ್ರವಾರ ರಾತ್ರಿಯ ಬಳಿಕ ಏರಿಕೆ ಕಂಡು ಶನಿವಾರ ಬೆಳಗ್ಗೆ ವೇಳೆಗೆ 9 ಮೀಟರ್ ಎತ್ತರದಲ್ಲಿ ಹರಿಯಿತು. ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಈ ಹಿನ್ನೆಲೆಯಲ್ಲಿ ನದಿ ಸನಿಹದ ತಗ್ಗು ಪ್ರದೇಶಗಳಿಗೆಲ್ಲ ಆವರಿಸಿಕೊಂಡಿತು. ಪ್ರತಿ ವರ್ಷವೂ ಮುಳುಗಡೆಯಾಗುವ ಆಲಡ್ಕ, ಬಡ್ಡಕಟ್ಟೆ, ಗೂಡಿನಬಳಿ ಬಂಟ್ವಾಳ ರಸ್ತೆ ಸಹಿತ ತೀರ ಪ್ರದೇಶಗಳು ಜಲಾವೃತಗೊಂಡವು. ಮಧ್ಯಾಹ್ನದ ವೇಳೆ ನದಿ ಇಳಿಮುಖವಾಗಿ ಹರಿಯಲಾರಂಭಿಸಿದ್ದು, ಸಂಜೆ ವೇಳೆ ಕಡಿಮೆಯಾಯಿತು. ಪಾಣೆಮಂಗಳೂರು, ಆಲಡ್ಕ, ನಂದಾವರ, ಬೋಗೋಡಿ, ಗೂಡಿನಬಳಿ, ಬಸ್ತಿಪಡ್ಪು, ಬಂಟ್ವಾಳ ಕೆಳಗಿನಪೇಟೆ, ತಲಪಾಡಿ, ಪೊನ್ನೋಡಿ, ತುಂಬೆ, ವಳವೂರು, ಪುದು, ನಾವೂರು, ಅಜಿಲಮೊಗರು ಪ್ರದೇಶಗಳಿಗೆ ನೀರು ನುಗ್ಗಿದೆ.

ಹಲವೆಡೆ ಹಾನಿ: ಗಾಳಿ ಮಳೆಯಿಂದ ತಾಲೂಕಿನ ಹಲವೆಡೆ ವ್ಯಾಪಕ ಹಾನಿಗಳುಂಟಾಗಿವೆ. ಕುಕ್ಕಿಪ್ಪಾಡಿ ಗ್ರಾಮದ ಸಿದ್ಧಕಟ್ಟೆ ಚರ್ಚ್ ಅಂಗನವಾಡಿ ಕೇಂದ್ರದ ಆವರಣಗೋಡೆ ಕುಸಿದುಬಿದ್ದಿದೆ. ಮಳೆನೀರು ಅಂಗನವಾಡಿ ಕಟ್ಟಡದ ಒಳಗೆ ನುಗ್ಗಿ ಹಾನಿ ಸಂಭವಿಸಿದೆ. ಜೊತೆಗೆ ಹಂಚಿನ ಛಾವಣಿಗೂ ಹಾನಿ ಸಂಭವಿಸಿದೆ.
ಮಳೆಯಿಂದಾಗಿ ಬಿ.ಸಿ.ರೋಡು- ಧರ್ಮಸ್ಥಳ ರಸ್ತೆಯ ಮಣಿಹಳ್ಳ ಸಮೀಪದ ಹಂಚಿಕಟ್ಟೆಯಲ್ಲಿ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಬಿದ್ದ ಪರಿಣಾಮ ಕೆಲಹೊತ್ತುಗಳ ಕಾಲ ಸಂಚಾರ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪಾಣೆಮಂಗಳೂರಿನ ಆಲಡ್ಕ ಸಮೀಪ ಮನೆಗಳಿಗೆ ನೀರು ನುಗ್ಗಿದೆ. ಇತಿಹಾಸ ಪ್ರಸಿದ್ಧ ಅಜಿಲಮೊಗರು ಜುಮ್ಮಾ ಮಸೀದಿ ಸಭಾಂಗಣದಲ್ಲಿ ನೀರು ತುಂಬಿತ್ತು. ಉಪ್ಪಿನಂಗಡಿ- ಬಂಟ್ವಾಳ ರಸ್ತೆ ಸಂಪೂರ್ಣ ಮುಳುಗಡೆಗೊಂಡಿತು. ನಂದಾವರ ಸಂಪರ್ಕ ಸೇತುವೆಯೂ ಮುಳುಗಡೆಯಾಗಿದೆ.

ಡ್ಯಾಂಗಳು ಭರ್ತಿ: ಶಂಭೂರು ಡ್ಯಾಂ ಭರ್ತಿಯಾಗಿದ್ದು, 14 ಗೇಟುಗಳನ್ನು ಶೇ.50ರಷ್ಟು ತೆರೆಯಲಾಗಿದೆ. ಆಗಾಗ ಸೈರನ್ ಮೊಳಗಿಸುವ ಮೂಲಕ ನೀರನ್ನು ಹರಿಯಬಿಡಲಾಯಿತು. ತುಂಬೆ ಅಣೆಕಟ್ಟಿನಲ್ಲಿ 7.8 ಮೀಟರ್ ಎತ್ತರಕ್ಕೆ ನೀರು ಹರಿದಿದೆ. ನಿನ್ನೆ ತುಂಬೆ ಡ್ಯಾಂನಲ್ಲಿ 6.4 ಮೀ ಎತ್ತರದಲ್ಲಿ ಸಂಗ್ರಹವಿತ್ತು. ಇಲ್ಲಿ ಎಲ್ಲ 30 ಗೇಟುಗಳನ್ನು ತೆರೆಯಲಾಗಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆತಂಕ ಮೂಡಿಸಿದ ನೇತ್ರಾವತಿ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಅಪಾರ ಪ್ರಮಾಣದಲ್ಲಿ ಕೃಷಿಗೆ ಹಾನಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*