ಬಂಟ್ವಾಳ

ರಕ್ಷಣಾ ಕಾರ್ಯಕ್ಕೆ ಜೀವರಕ್ಷಕರು ಸನ್ನದ್ಧ

ಜಾಹೀರಾತು

ಇತ್ತೀಚೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೈದ ಯುವಕನ ರಕ್ಷಣೆಗೆ ನದಿಗೆ ಧುಮುಕಿದ ಸ್ಥಳೀಯ ಈಜುಗಾರ ಬೇಡಿಕೆಗೆ ಅನುಗುಣವಾಗಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಸೇವಾಂಜಲಿ ರಕ್ಷಕ ಎನ್ನುವ ನಾಡದೋಣಿಯನ್ನು ಕೊಡುಗೆಯಾಗಿ ನೀಡಿತ್ತು. ಬಂಟ್ವಾಳದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಈಜುಗಾರರಾದ ಸತ್ತಾರ್, ಮಹಮ್ಮದ್ ಮತ್ತವರ ತಂಡ ದೋಣಿಯ ಮೂಲಕ ಜನರ ರಕ್ಷಣೆಗೆ ಸಿದ್ಧಗೊಂಡು ನಿಂತಿದೆ. ಗೃಹರಕ್ಷಕದಳ, ಅಗತ್ಯವಿದ್ದರೆ ವಿಪತ್ತು ನಿರ್ವಹಣಾ ಪಡೆಯೂ ಆಗಮಿಸಲಿದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ಬಂಟ್ವಾಳ ತಾಲೂಕಿನ ಏಳು ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಂಟ್ವಾಳ ಐಬಿಯ ಬದಲು ತೌಹೀದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೇಂದ್ರ ತೆರೆಯಲಾಗಿದೆ. ಇದುವರೆಗೆ ಯಾರೂ ಆಗಮಿಸಿಲ್ಲ, ಪ್ರವಾಹ ಇಳಿಮುಖವಾಗುವ ಸಾಧ್ಯತೆ ಇದ್ದರೂ ಮುಂಜಾಗರೂಕತಾ ಕ್ರಮವಾಗಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts