15 ದಿನದ ಹಿಂದೆಯಷ್ಟೇ ಬಿಡುಗಡೆಯಾದ ವ್ಯಕ್ತಿ ಮತ್ತೆ ಕಳ್ಳತನ ಆರೋಪದಲ್ಲಿ ಅರೆಸ್ಟ್

ಬಿ.ಮೂಡ ಗ್ರಾಮದ ಮೊಡಂಕಾಪು ಹಾಲು ಉತ್ಪಾದಕರ ಸಹಕಾರಿ  ಸಂಘ ದಿಂದ ನಗದು ಕಳ್ಳವುಗೈದಿದ್ದ ಆರೋಪಿಯನ್ನು ಬಂಟ್ವಾಳನಗರ ಠಾಣೆಯ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಿ.ಮೂಡಗ್ರಾಮದ ಪಲ್ಲಮಜಲು ನಿವಾಸಿ ಇಕ್ಕ ಯಾನೆ ಮಹಮ್ಮದ್ ಇಕ್ಬಾಲ್ (51) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಎಸ್ ಐ ಕಲೈಮಾರ್ ಜೊತೆ ಸಿಬ್ಬಂದಿಗಳಾದ ಸುರೇಶ ,ಲೋಕೇಶ  , ಉಸ್ಮಾನ ವಾಲಿಕಾರ ,ಶ್ರೀಕಾಂತ, ಬಸಪ್ಪ,ವಿವೇಕ, ಕುಮಾರ ಭಾಗವಹಿಸಿದ್ದರು. ಈತನಿಂದ  ನಗದು  1100 ರೂ.,ತಲಾ ಒಂದು ಟಾರ್ಜ್‌, ಸ್ಕ್ರೂಡ್ರೈವರ್, ಕಬ್ಬಿಣದ ರಾಡ್‌.  ಎಕ್ಸೋ ಬ್ಲೆಡ್‌ . ಮೀನಿಗೆ ಹಾಕುವ ಗಾಳ,ನೈಲಾನ್‌ ಹಗ್ಗ ಹೊಂದಿದ್ದ ಬ್ಯಾಗ್‌ ನ್ನು ವಶಪಡಿಸಲಾಗಿದೆ. ಆಗಷ್ಟ್ 7 ರಂದು ಬಿ.ಮೂಡ ಗ್ರಾಮ ಬಂಟ್ವಾಳ ತಾಲೂಕುಎಂಬವರು ಮೊಂಡಕಾಪು ಹಾಲು ಉತ್ಪಾದಕರ ಸಹಕಾರಿ ಸಂಘ ದಲ್ಲಿ ಕಳವು ಕೃತ್ಯ ನಡೆದಿತ್ತು.

ಜಾಹೀರಾತು

ಶನಿವಾರ ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ವಿಭಾಗದ ಎಸ್ ಐ  ಕಲೈಮಾರ್ ಮತ್ತವರ ಸಿಬ್ಬಂದಿಗಳು  ಗಸ್ತಿನಲ್ಲಿದ್ದಾಗ ಅಮ್ಟಾಡಿ ಗ್ರಾಮದ ಗೋರೆಮಾರ್‌ ಬಳಿ ಜೋಸೆಫ್‌  ಕಟ್ಟಡ ಎದುರು ಬ್ಯಾಗ್ ಹಿಡಿದು ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಇಲಾಖಾ ಜೀಪನ್ನು ಕಂಡು ಮರೆಮಾಚಲು ಯತ್ನಿಸಿದ್ದನೆನ್ನಲಾಗಿದೆ.  ಅನುಮಾನಗೊಂಡ   ಪೊಲೀಸರು ತಕ್ಷಣ ಅತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹೆಸರು ಇಕ್ಕ ಯಾನೆ ಮಹಮ್ಮದ್ ಇಕ್ಬಾಲ್ ಎಂದು ತಿಳಿಸಿದ್ದಾನೆ. ಮತ್ತಷ್ಟು ಅತನನ್ನು ತನಿಖೆಗೊಳಪಡಿಸಿದಾಗ 15 ದಿನಗಳ ಹಿಂದೆಯಷ್ಠೆ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದು, ಊರಿನಲ್ಲಿ ಯಾವುದೇ ಕೆಲಸವಿಲ್ಲದ ಕಾರಣ ಮತ್ತೆ ಕಳವು ಮಾಡಿಕೊಂಡು ಮೀನು ಹಿಡಿಯಲು ಹೊರಟಿರುವುದಾಗಿ ತಿಳಿಸಿದ್ದಾನೆಯಲ್ಲದೆ ಒಂದು ದಿವಸದ ಹಿಂದೆ ಮೊಡಂಕಾಪು ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನಗದು ಹಣವನ್ನು ಕಳವುಗೈದಿರುವುದನ್ನು ಬಾಯಿಬಿಟ್ಟಿದ್ದಾನೆ. ತಕ್ಷಣ ಈತನನ್ನು ಬಂಧಿಸಿ,ಕೈಯಲ್ಲಿದ್ದ ಬ್ಯಾಗ್ ಸಹಿತ ಸೊತ್ತನ್ನು ವಶಪಡಿಸಲಾಯಿತು. ಬಂಧಿತ ಇಕ್ಕನನ್ನು ಭಾನುವಾರ ಬಂಟ್ವಾಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "15 ದಿನದ ಹಿಂದೆಯಷ್ಟೇ ಬಿಡುಗಡೆಯಾದ ವ್ಯಕ್ತಿ ಮತ್ತೆ ಕಳ್ಳತನ ಆರೋಪದಲ್ಲಿ ಅರೆಸ್ಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*