ಅಕ್ಷರ ದಾಸೋಹ ನೌಕರರಿಗೆ ವೇತನದ ಜೊತೆಗೆ ಕೋವಿಡ್ ಪರಿಹಾರ ನೀಡಿ

ಜಾಹೀರಾತು

ಕೊರೊನಾ ವೈರಸ್ ಭೀತಿಯಿಂದ ಲಾಕ್ಡೌನ್ ಪರಿಸ್ಥಿಯಿಂದ ಸಂಕಷ್ಟದಲ್ಲಿರುವ ಅಕ್ಷರ ದಾಸೋಹ ನೌಕರರಿಗೆ ವೇತನ ನೀಡುವ ಬಗ್ಗೆ ಮತ್ತು ದಾಸೋಹ ನೌಕರರಿಗೆ ಲಾಕ್ಡೌನ್ ಅವಧಿಯ ಪ್ರತಿ ತಿಂಗಳು 6 ಸಾವಿರ ರೂ ನೀಡಬೇಕು ಮತ್ತು ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬಿ.ಸಿ.ರೋಡ್ ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ  ಸಿಐಟಿಯು ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ. ಕೋವಿಡ್-19 ಲಾಕ್ಡೌನ್ ಪ್ರಾರಂಭವಾದ ಬಳಿಕ ಅವರಿಗೆ ಯಾವುದೇ ಪರಿಹಾರ ದೊರೆತಿಲ್ಲ. 2 ಲಕ್ಷ ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಹೇಳುತ್ತಿದ್ದರೂ ಅವರಿಗೆ ತನಕ ಯಾವುದೇ ನಯಾ ಪೈಸೆ ದೊರೆತಿಲ್ಲ  ಕೆಲಸವೂ ಇಲ್ಲ ಪರಿಹಾರವೂ ಇಲ್ಲದೆ ಅವರು ಜೀವನ ನಿರ್ವಹಣಿಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿನ್ನಲೆಯಲ್ಲಿ ಅವರಿಗೆ ಏಪ್ರಿಲ್ ನಂತರದ ವೇತನ ಹಾಗೂ ತಿಂಗಳಿಗ 6 ಸಾವಿರ ರೂದಂತೆ ಕೋವಿಡ್ ಪರಿಹಾರವನ್ನು ಏಕಗಂಟಿನಲ್ಲಿ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಅಕ್ಷರ ದಾಸೋಹ ನೌಕಕರ ಸಂಘಟನೆಯ ತಾಲೂಕು ಅಧ್ಯಕ್ಷರಾದ ವಿನಯ ನಡುಮೊಗರು ,ಸಿಐಟಿಯು ಮುಖಂಡರಾದ ಉದಯ ಕುಮಾರ್ ಬಂಟ್ವಾಳ, ಜನಾರ್ಧನ ಕುಲಾಲ್, ಡಿವೈಎಫ್ ಮುಖಂಡರಾದ ಸುರೇಂದ್ರ ಕೋಟ್ಯಾನ್, ಲೋಲಾಕ್ಷಿ ಬಂಟ್ವಾಳ, ಲಿಯಾಕತ್ ಖಾನ್ ಮುಂತಾದವರು ಇದ್ದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಕ್ಷರ ದಾಸೋಹ ನೌಕರರಿಗೆ ವೇತನದ ಜೊತೆಗೆ ಕೋವಿಡ್ ಪರಿಹಾರ ನೀಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*