ವಿಟ್ಲ

ಮನೆ ಅಪಾಯದಲ್ಲಿ-ರಸ್ತೆ ಸಂಪರ್ಕ ಕಡಿತ

ಜಾಹೀರಾತು

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಮುಂಡತ್ತಜೆಯಲ್ಲಿ ಭಾರೀ ಪ್ರಮಾಣದಲ್ಲಿ ಮನೆ ಪಕ್ಕದ ಧರೆ ಕುಸಿದು ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದೇ ಸಂದರ್ಭ ಧರೆಯ ಪಕ್ಕದಲ್ಲಿದ್ದ ಮನೆ ಯಾವುದೇ ಕ್ಷಣ ಕುಸಿದು ಬೀಳುವ ಹಂತದಲ್ಲಿದೆ.

ಕೊಳ್ನಾಡು ಮುಂಡತ್ತಜೆಪಂಜಿಗದ್ದೆ ಸಂಪರ್ಕ ರಸ್ತೆಗೆ ತಾಗಿಕೊಂಡಿರುವ ಶ್ರೀಧರ ಶೆಟ್ಟಿ ಎಂಬವರ ಮನೆ ಯಾವುದೇ ಕ್ಷಣ ನೆಲಕಚ್ಚುವ ಹಂತದಲ್ಲಿದೆ. ರಸ್ತೆ ಪಕ್ಕದ ಧರೆ ಭಾರಿ ಪ್ರಮಾಣದಲ್ಲಿ ಕುಸಿದು ಬಿದ್ದಿದ್ದು ಎತ್ತರದಲ್ಲಿರುವ ಮನೆ ಅಪಾಯ ಸ್ಥಿತಿಯಲ್ಲಿದೆ. ಸ್ಥಳೀಯ ಯುವಕರ ಸಹಕಾರದಲ್ಲಿ ಸುಮಾರು ೬ಗಂಟೆಗಳ ಕಾಲ ಜೆಸಿಬಿ ಯಂತ್ರದ ಮೂಲಕ ಮಣ್ಣನ್ನು ತೆರವುಗೊಳಿಸಲಾಗಿದೆ. ಇದೇ ಸಂದರ್ಭ ಸೆರ್ಕಳ ಕೋಟಂಕೋಟಿ ಎಂಬಲ್ಲಿ ಮನೆಯ ಮೇಲೆ ಈಚಲು ಮರ ಮುರಿದು ಬಿದ್ದು ಭಾಗಶ: ಹಾನಿಗೊಂಡಿದೆ. ಅಲ್ಲೇ ಪಕ್ಕದಲ್ಲಿನ ಮನೆ ಆವರಣದಲ್ಲಿದ್ದ ಬಚ್ಚಲು ಮನೆಯ ಹಿಂಭಾಗದಲ್ಲಿರುವ ಗುಡ್ಡದಿಂದ ಭಾರಿ ಗಾತ್ರದ ಬಂಡೆಕಲ್ಲು ಉರುಳಿಬಿದ್ದು ಕಟ್ಟಡ ನಾಶವಾಗಿದ್ದು ಮನೆಯವರೆಲ್ಲ ಅದೃಷ್ಟವಶಾತ್ ಪಾರಾಗಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ