ಬಂಟ್ವಾಳ

ಬಂಟ್ವಾಳ ತಾಲೂಕಿನ ತೊಡಂಬಿಲದಲ್ಲಿ ಕುಸಿತದ ಭೀತಿಯಲ್ಲಿ ಮನೆ

ಜಾಹೀರಾತು

ಬಂಟ್ವಾಳ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ತಾಲೂಕಿನ ಕಳ್ಳಿಗೆ ಗ್ರಾಮದ ತೊಡಂಬಿಲ ಎಂಬಲ್ಲಿ ಭೂಕುಸಿತ ಉಂಟಾಗಿದ್ದು, ಮನೆಯೊಂದು ಸಂಪೂರ್ಣ ಅಪಾಯಕ್ಕೆ ಸಿಲುಕಿದೆ.ಭೂಕುಸಿತದ ವಿಚಾರ ಮನೆಮಂದಿಗೆ ಸೋಮವಾರ ಬೆಳಗ್ಗೆ ತಿಳಿದು ಬಂದಿದ್ದು, ತತ್‌ಕ್ಷಣ ಮನೆಯನ್ನು ಖಾಲಿ ಮಾಡಿದರು.

ಜಾಹೀರಾತು

ತೊಡಂಬಿಲ ನಿವಾಸಿ ಅನಿಲ್ ಮೊಂತೆರೊ ಅವರ ಮನೆಯ ಕೆಳಭಾಗದಲ್ಲಿ ಭಾನುವಾರ ತಡರಾತ್ರಿ ಕುಸಿತ ಉಂಟಾಗಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಮತ್ತಷ್ಟು ಕುಸಿದಿದೆ. ಮನೆಯವರು ಅಲ್ಲೇ ಪಕ್ಕದಲ್ಲಿರುವ ಅನಿಲ್ ಅವರ ತಾಯಿ ಮನೆಗೆ ತೆರಳಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಮಾಹಿತಿ ಪಡೆದು ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್., ಮಾಜಿ ಸಚಿವ ಬಿ.ರಮಾನಾಥ ರೈ , ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ವಿಜಯ ಡಿಸೋಜ, ರಮೇಶ್, ಪ್ರಕಾಶ್ ಶೆಟ್ಟಿ ತುಂಬೆ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಗ್ರಾಮಕರಣಿಕ ಪ್ರಶಾಂತ್, ಗ್ರಾ.ಪಂ.ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts