ವಿಟ್ಲ

ನಾಪತ್ತೆಯಾಗಿದ್ದ ಕನ್ಯಾನ ವ್ಯಕ್ತಿಯ ಮೃತದೇಹ ಹೊಳೆಯಲ್ಲಿ ಪತ್ತೆ

ಜಾಹೀರಾತು

ಅಕ್ಕನ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ತರಲೆಂದು ಪೇಟೆಗೆ ಹೋಗಿದ್ದ ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಮೃತದೇಹ ಸಮೀಪದ ಪೆರುವಾಯಿಯ ನೆಕ್ಕರೆ ಹೊಳೆಯಲ್ಲಿ ಪತ್ತೆಯಾಗಿದೆ.ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸತೀಶ್ (44) ಸಾವನ್ನಪ್ಪಿದವರು. ಇವರು ಸತೀಶ್ ಅವರು ಬಂಟ್ವಾಳದಲ್ಲಿ ಭತ್ತ ಕೊಯಿಲು ಮತ್ತು ಕಟಾವು ಮಾಡುವ ಕೆಲಸ ಮಾಡುತ್ತಿದ್ದು, ಭಾನುವಾರ ಕೆಲಸ ಮುಗಿಸಿಕೊಂಡು ಕನ್ಯಾನದಲ್ಲಿರುವ ಮನೆಯ ಕಡೆ ಬಂದಿದ್ದರು. ಬಳಿಕ ಅಕ್ಕನ ಮಕ್ಕಳಿಗೆ ತಿಂಡಿ ತರಲೆಂದು ಸಮೀಪದ ಅಂಗಡಿಗೆಂದು ತೆರಳಿದವರು ಮನೆಗೆ ಬರದೆ ಕಾಣೆಯಾಗಿದ್ದಾರೆ ಎಂದು ತಮ್ಮ ಆಶೋಕ್ ದೂರು ನೀಡಿದ್ದರು. ನಂದರಬೆಟ್ಟು ಎಂಬಲ್ಲಿನ ತೋಡಿನ ಸಮೀಪದ ಗಿಡದ ಮೊದೆಯ ಮಧ್ಯೆ ಸತೀಶ್ ಅವರು ಧರಿಸಿದ ಬಟ್ಟೆ ಹಾಗೂ ಕೊಡೆ ಕಂಡುಬಂದಿದ್ದು ಇವರು ಆಕಸ್ಮಿಕ ವಾಗಿ ಕಾಲು ಜಾರಿ ತೋಡಿಗೆ ಬಿದ್ದು ನಾಪತ್ತೆಯಾಗಿರಬೇಕು ಎಂಬ ಸಂಶಯವನ್ನು ಮನೆಯವರು ವ್ಯಕ್ತ ಪಡಿಸಿದ್ದರು. ಇದೀಗ ಅವರ ಮೃತದೇಹ ಪೆರುವಾಯಿಯ ನೆಕ್ಕರೆ ಹೊಳೆಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.