ಬಂಟ್ವಾಳ

ಮಾಣಿ ಯುವಕ ಮಂಡಲ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಆಚರಣೆ

ಜಾಹೀರಾತು

ಬಂಟ್ವಾಳ: ಮಾಣಿ ಯುವಕ ಮಂಡಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ಮಾಣಿ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಣಮ್ಯ ಶೆಟ್ಟಿ (613) ಮತ್ತು ಪ್ರತೀಕಾ ಕುಲಾಲ್ (611) ಅವರನ್ನು ಗೌರವಿಸಲಾಯಿತು.

ಪರಿಸರದ 25 ಬಡ ಕುಟುಂಬಗಳಿಗೆ ಅಕ್ಕಿ ಮತ್ತು ತೆಂಗಿನಕಾಯಿ ವಿತರಿಸಲಾಯಿತು. ಮಾಣಿ ಶ್ರೀ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ ಮಾಣಿಗುತ್ತು ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಮಾಜಿ ಸಚಿವ ಬಿ ರಮಾನಾಥ ರೈ, ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಾಣಿ ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಜಗದೀಶ್ ಜೈನ್, ಕೋಶಾಧಿಕಾರಿ ನಾಗರಾಜ ಪೂಜಾರಿ, ಕ್ರೀಡಾ ಕಾರ್ಯದರ್ಶಿ ದಯಾನಂದ ಪೂಜಾರಿ, ಯುವಕ ಮಂಡಲದ ಹಿರಿಯ ಸದಸ್ಯರಾದ ಹಮೀದ್ ಪಲ್ಕೆ, ಮೋಹನದಾಸ್ ಸುವರ್ಣ, ಗುರುಪ್ರಸಾದ್ ಬಲ್ಯ, ವಿಕೇಶ್ ಶೆಟ್ಟಿ ಕೊಡಾಜೆ, ಗಿರೀಶ್ ಪೂಜಾರಿ ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು. ಬರಿಮಾರು-ಕಲ್ಲೆಟ್ಟಿ ಕಾನಲ್ತಾಯ-ಮಹಾಕಾಳಿ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಪುರುಷರ ಕಬಡ್ಡಿ, ಮಡಕೆ ಒಡೆಯುವುದು ಮತ್ತು ಅಡಿಕೆ ಮರ ಹತ್ತಿ  ಮೊಸರು ತೆಗೆಯುವ ಸ್ಪರ್ಧೆಗಳನ್ನು ಸಾಂಕೇತಿಕವಾಗಿ ನಡೆಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts