ಬಂಟ್ವಾಳ: ಪಠ್ಯ ಪುಸ್ತಕಗಳು ವಿದ್ಯಾರ್ಥಿ ಗಳ ಸ್ವಯಂ ಕಲಿಕೆಗೆ ಪೂರಕವಾಗಲಿದೆ, ಶಿಕ್ಷಕರ ನಿರಂತರ ಸಂಪರ್ಕದೊಂದಿಗೆ ವಿದ್ಯಾರ್ಥಿ ಗಳು ಪಠ್ಯ ಪುಸ್ತಕ ಗಳ ಉಪಯೋಗದಿಂದ ಸ್ವಯಂಕಲಿಕೆಯನ್ನು ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ ಹೇಳಿದರು.
ಜಾಹೀರಾತು
ಅವರು ಸ.ಪ.ಪೂ.ಕಾಲೇಜು ವಾಮದಪದವು ಇಲ್ಲಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪಾಂಗಲ್ಪಾಡಿ ವಿಷ್ಣು ಮೂರ್ತಿ ದೇವಾಲಯದ ಪ್ರಾಂಗಣದಲ್ಲಿ ಪಠ್ಯ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.
ವಾಮದಪದವು ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಅವರವರ ಜನವಸತಿ ಪ್ರದೇಶಕ್ಕನುಗುಣಸಾರವಾಗಿ ಮಾವಿನಕಟ್ಟೆ, ಪಿಲಿಮೊಗರು, ಪಾಂಗಲ್ಪಾಡಿ, ಕೊರಗಟ್ಟೆ, ಬಸ್ತಿಕೋಡಿ ಮೊದಲಾದ ಕಡೆಗಳಲ್ಲಿ ಊರಪ್ರಮುಖರ ನೇತ್ರತ್ವದಲ್ಲಿ ಪುಸ್ತಕ ವಿತರಿಸಲಾಯಿತು. ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, , ಎಸ್.ಡಿ.ಎಂ.ಸಿ.ಸದಸ್ಯ ರು ಹಾಗೂ ಪ್ರೌಢ ಶಾಲಾ ವಿಭಾಗದ ಶಿಕ್ಷಕರ ಉಪಸ್ಥಿತಿಯಲ್ಲಿ ವಿತರಣೆ ನಡೆಸಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಾಮದಪದವು: ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ"
Be the first to comment on "ವಾಮದಪದವು: ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ"