ಬೆಂಗಳೂರು ಹಿಂಸಾಚಾರ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ – ವಿಶ್ವ ಹಿಂದು ಪರಿಷತ್ ನಿಂದ ಬಂಟ್ವಾಳದಲ್ಲಿ ಪ್ರತಿಭಟನೆ, ಮನವಿ ಸಲ್ಲಿಕೆ

ಜಾಹೀರಾತು

ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಹಿಂಸಾಚಾರದ ಘಟನೆಯನ್ನು ಖಂಡಿಸಿ ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ಬಂಟ್ವಾಳ ಪ್ರಖಂಡ ವತಿಯಿಂದ ಗುರುವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಯಿತು.

ಬೆಂಗಳೂರಿನಲ್ಲಿ ನಡೆದ ದೊಂಬಿ, ಬೆಂಕಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ, ಅಮಾಯಕರಿಗೆ ತೊಂದರೆ, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಧ್ವಂಸಕ್ಕೆ ಯತ್ನಿಸಿದ ಕೃತ್ಯವನ್ನು ಖಂಡಿಸಿ, ಸರಕಾರವು ಈ ಕುರಿತು ಸೂಕ್ತ ಕ್ರಮಕೈಗೊಂಡು ಎನ್‌ಐಎ ತನಿಖೆಗೆ ಒಳಪಡಿಸಬೇಕು ಎಂದು ಬಂಟ್ವಾಳ ತಹಶೀಲ್ದಾರ್ ಅವರ ಮೂಲಕ ಸರಕಾರಕ್ಕೆ ಮನವಿ ನೀಡಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ವಿಹಿಂಪ ಜಿಲ್ಲಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ ಮಾತನಾಡಿ, ಬೆಂಗಳೂರಿನಲ್ಲಿ ನಡೆದ ಘಟನೆಯು ಪೂರ್ವಯೋಜಿತ ಕೃತ್ಯವಾಗಿದ್ದು, ಘಟನೆಯು ಅತ್ಯಂತ ವ್ಯವಸ್ಥಿತವಾಗಿ ನಡೆದಿದೆ. ಹೀಗಾಗಿ ಘಟನೆಯನ್ನು ಎನ್‌ಐಎ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಜರಂಗ ದಳ ಜಿಲ್ಲಾ ಸಹಸಂಚಾಲಕರಾದ ಭರತ್ ಕುಮ್ಡೇಲು, ಗುರುರಾಜ್ ಬಂಟ್ವಾಳ, ತಾಲೂಕು ಪ್ರಮುಖರಾದ ಸುರೇಶ್ ಬೆಂಜನಪದವು, ಶಿವಪ್ರಸಾದ್ ತುಂಬೆ, ದೀಪಕ್ ಬಂಟ್ವಾಳ, ಭುವಿತ್ ಬಂಟ್ವಾಳ, ಅಭಿನ್ ರೈ, ಪ್ರಸಾದ್ ಬೆಂಜನಪದವು, ಅಕೇಶ್ ರಾಮನಗರ ಮೊದಲಾದವರಿದ್ದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೆಂಗಳೂರು ಹಿಂಸಾಚಾರ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ – ವಿಶ್ವ ಹಿಂದು ಪರಿಷತ್ ನಿಂದ ಬಂಟ್ವಾಳದಲ್ಲಿ ಪ್ರತಿಭಟನೆ, ಮನವಿ ಸಲ್ಲಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*