ನಡೆಯಿತು ಬಿ.ಸಿ.ROAD ಹೊಂಡ ಮುಚ್ಚುವ ಕಾರ್ಯ, ಶಾಶ್ವತ ಪರಿಹಾರ ಬೇಕು – ಜನರ ಒತ್ತಾಯ

ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡಿನ  ಪ್ರಮುಖ ರಸ್ತೆಯಲ್ಲಿ ಖಾಸಗಿ ಬಸ್ ತಂಗುದಾಣದವರೆಗಿನ ರಸ್ತೆ ಹೊಂಡದಿಂದ ಕೂಡಿದ್ದು, ಶಾಶ್ವತ ಪರಿಹಾರಕ್ಕಾಗಿ ಪ್ರಯಾಣಿಕರು ಕಾಯುತ್ತಿದ್ದಾರೆ ಎಂಬ ಆಗಸ್ಟ್ 11ರಂದು ಪ್ರಸಾರವಾದ ಬಂಟ್ವಾಳನ್ಯೂಸ್ ವರದಿಗೆ ಸ್ಪಂದನೆ ದೊರಕಿದೆ, ಶುಕ್ರವಾರ ಹೊಂಡಗಳು ಇದ್ದ ಜಾಗದಲ್ಲಿ ತೇಪೆ ಹಚ್ಚುವ ಕಾರ್ಯ ನಡೆಯಿತು. ಬಂಟ್ವಾಳನ್ಯೂಸ್ ನಲ್ಲಿ ವರದಿಯ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿರಿ

ಅದೋ ನೋಡಿ, ಮತ್ತೆ ಅದೇ ಜಾಗದಲ್ಲಿ ಬಿ.ಸಿ.ROAD ನಲ್ಲಿ ದೊಡ್ಡ ದೊಡ್ಡ ಹೊಂಡ!!

ಜಾಹೀರಾತು

 

ಶುಕ್ರವಾರ ಬಿ.ಸಿ.ರೋಡಿನಲ್ಲಿರುವ ರಸ್ತೆ ಹೊಂಡಗಳಿಗೆ ತೇಪೆ ಹಚ್ಚುವ ಕಾರ್ಯ ನಡೆಯಿತು.

ಆದರೆ ಆಗಾಗ್ಗೆ ಇಲ್ಲಿ ತೇಪೆ ಕಾರ್ಯವನ್ನು ಸ್ಥಳೀಯರು ಮಾಡುತ್ತಿದ್ದರೂ ಮತ್ತೆ ಕಿತ್ತು ಹೋಗುವ ಹೊಂಡಗಳು ಸವಾಲಾಗಿ ಪರಿಣಮಿಸಿವೆ. ಹಲವು ವರ್ಷಗಳಿಂದ ಅದೇ ಜಾಗದಲ್ಲಿ ಹೊಂಡಗಳು ಉದ್ಭವವಾಗುತ್ತಿರುವುದು ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಕೆಣಕುತ್ತಿವೆ. ದ್ವಿಚಕ್ರ, ಘನ ವಾಹನಗಳ ಸುಗಮ ಸಂಚಾರಕ್ಕೂ ಇದು ತೊಡಕಾಗಿದೆ. ಸಾಲದು ಎಂಬಂತೆ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನಿಂತು ಕೆರೆಯಂತಾಗುತ್ತಿದ್ದು, ವಾಹನಗಳ ಓಡಾಟಕ್ಕೆ ಪ್ರಯಾಣಿಕರು ಒದ್ದೆಯಾಗಬೇಕಾಗುತ್ತದೆ. ಧಾರಾಕಾರ ಮಳೆಯ ಸಂದರ್ಭ ಮೇಲ್ಸ್ ತುವೆಯ ಮೇಲ್ಬಾಗದಿಂದ ನೀರು ರಸ್ತೆಗೆ ಸುರಿದು ಅಭಿಷೇಕ ಮಾಡುವಂತೆ ಭಾಸವಾಗುತ್ತಿದೆ. ಇದರ ಮೂಲ ಸಮಸ್ಯೆ ಕಂಡುಹಿಡಿದು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ.

 

ಜಾಹೀರಾತು

About the Author

Harish Mambady
ಕಳೆದ 27 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ. Harish Mambady - who has experience working as a Journalist in various Print and Digital Media in Dakshina Kannada, Udupi (Mangalore, Manipal, and Bantwal) for the past 27 years, He Started digital Media www.bantwalnews.com in 2016.

Be the first to comment on "ನಡೆಯಿತು ಬಿ.ಸಿ.ROAD ಹೊಂಡ ಮುಚ್ಚುವ ಕಾರ್ಯ, ಶಾಶ್ವತ ಪರಿಹಾರ ಬೇಕು – ಜನರ ಒತ್ತಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*