ಹಿರಿಯ ನಾಗರಿಕರಿಗೆ ‘ಕಾಳಜಿ’ ಸಹಿತ ಹಲವು ಯೋಜನೆಗಳೊಂದಿಗೆ 21ರಂದು ಶ್ರೀ ಶಂಕರ ಪತ್ತಿನ ಸಹಕಾರ ಸಂಘ ಪ್ರಾರಂಭ

ಜಾಹೀರಾತು

ಹಿರಿಯ ನಾಗರಿಕರಿಗೆ ಕಾಳಜಿ ಎಂಬ ಯೋಜನೆ ಸಹಿತ ಹಲವು ಆರ್ಥಿಕ ಚಟುವಟಿಕೆಗಳಿಗೆ ನೆರವು ನೀಡುವ ಯೋಜನೆಗಳೊಂದಿಗೆ ಬಂಟ್ವಾಳ ತಾಲೂಕಿನ ಮೇಲ್ಕಾರ್ ನ ಎಂ.ಎಚ್. ಹೈಟ್ಸ್ ನಲ್ಲಿ ಆ.21ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಶ್ರೀ ಶಂಕರ ಪತ್ತಿನ ಸಹಕಾರ ಸಂಘ ನಿ. ಆರಂಭಗೊಳ್ಳಲಿದೆ. ಈ ವಿಷಯವನ್ನು ಸಂಘದ ಮುಖ್ಯ ಪ್ರವರ್ತಕ ಕೈಯೂರು ನಾರಾಯಣ ಭಟ್ ಮೇಲ್ಕಾರ್ ನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಜಾಹೀರಾತು

ದೀಪೊಜ್ವಲನವನ್ನು ಸಂಸದ ನಳಿನ್ ಕುಮಾರ್ ಕಟೀಲು ಮಾಡಲಿದ್ದಾರೆ, ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ.ಮಾಜಿ ಸಚಿವ ರಮಾನಾಥ ರೈ ಗಣಕಯಂತ್ರ ಉದ್ಘಾಟನೆ ಮಾಡಲಿದ್ದು, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಎಂ.ಎಚ್.ಹೈಟ್ಸ್ ನ ಮಾಲಕ ಮಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ವಿವರಿಸಿದರು.1000 ಸದಸ್ಯರ ಗುರಿಯನ್ನು ಹೊಂದಿದ್ದು ಈಗಾಗಲೇ ಸುಮಾರು 600ಕ್ಕಿಂತಲೂ ಅಧಿಕ ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದೆ.  13 ಮಂದಿ ಸಹ ಪ್ರವರ್ತಕರು ಈ ಸಂಸ್ಥೆ ಯಲ್ಲಿ ಕಾರ್ಯನಿರ್ವಹಿಸಲಿದ್ದು ಸಿಬ್ಬಂದಿಗಳ ನೇಮಕಾತಿ ನಡೆದಿದೆ ಎಂದು ತಿಳಿಸಿದರು. ಸಹಪ್ರವರ್ತಕರಾದ ಜಯಾನಂದ ಪೆರಾಜೆ, ಜಯರಾಮ ಪೂಜಾರಿ, ಮುರಳೀಧರ ರಾವ್, ಎಂ.ಈಶ್ವರ ಭಟ್, ವೇದಮೂರ್ತಿ ಸುದರ್ಶನ ಮಯ್ಯ ಕೊಳಕೆ ಸುದ್ದಿಗೋಷ್ಡಿಯಲ್ಲಿ ಉಪಸ್ಥಿತರಿದ್ದರು.

 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಿರಿಯ ನಾಗರಿಕರಿಗೆ ‘ಕಾಳಜಿ’ ಸಹಿತ ಹಲವು ಯೋಜನೆಗಳೊಂದಿಗೆ 21ರಂದು ಶ್ರೀ ಶಂಕರ ಪತ್ತಿನ ಸಹಕಾರ ಸಂಘ ಪ್ರಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*