ಬಂಟ್ವಾಳ

ಬಿಜೆಪಿ ಸಜೀಪಮುನ್ನೂರು ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆ

ಜಾಹೀರಾತು

ಬಿಜೆಪಿಯ ಸಜೀಪಮುನ್ನೂರು ಮಹಾಶಕ್ತಿ ಕೇಂದ್ರದ ಪಕ್ಷದ ವಿವಿದ ಸ್ತರದ ಜವಾಬ್ದಾರಿ ಇರುವ ಪ್ರಮುಖರ ಸಭೆ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕ್ಷೇತ್ರದ ಪಕ್ಷದ ಕಾರ್ಯಾಲಯದಲ್ಲಿ ನಡೆಯಿತು.

ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಅವರು ಪಕ್ಷದ ಸೂಚನೆಗಳನ್ನು ತಿಳಿಸಿ ಇದನ್ನು ಬೂತ್ ಮಟ್ಟಕ್ಕೆ ಮುಟ್ಟಿಸಿ ಸ್ಥಾನೀಯ ಸಮಿತಿಯನ್ನು ಸಕ್ರಿಯಗೊಳಿಸುವಂತೆ ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷ, ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಮಾತಾನಾಡಿ ಗ್ರಾಮರಾಜ್ಯದಿಂದ ಮಾತ್ರ ರಾಮರಾಜ್ಯ ಸಾದ್ಯ. ನಾವೆಲ್ಲ ಪ್ರಬುಧ್ಧ ಕಾರ್ಯಕರ್ತರು ನಾವೆಲ್ಲ ನಮ್ಮ ನಮ್ಮ ಪಂಚಾಯತ್ ನ ಗೆಲುವಿನ ಗುರಿಯನ್ನು ಇಟ್ಟು ಮುಂದಿನ ದಿನಗಳಲ್ಲಿ ಕೆಲಸ ಮಾಡೋಣ ಎಂದರು. ಪಕ್ಷದ ಅಧ್ಯಕ್ಷರಾದ ದೇವಪ್ಪ ಪೂಜಾರಿ ಬಡಗಬೆಳ್ಳೂರು ಮಾತನಾಡಿ ಪಕ್ಷ ನಮ್ಮ ನಿಮ್ಮೆಲ್ಲರ ಮೇಲೆ ವಿಶ್ವಾಸ ಇಟ್ಟು ಜವಾಬ್ದಾರಿಗಳನ್ನು ನೀಡಿದೆ. ಈ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡೋಣ. ಶಾಸಕರಾದ ರಾಜೇಶ್ ನಾಯ್ಕ್ ಅಭಿವೃಧ್ಧಿ ಕೆಲಸವನ್ನು ಬೂತಿನ ಪ್ರತಿ ಮನೆಗೆ ಮುಟ್ಟಿಸಿ ಅತೀ ಹೆಚ್ಚಿನ ಪಂಚಾಯತ್ ಗೆದ್ದು ಶಾಸಕರ ಕೈಯನ್ನು ಬಲಪಡಿಸೋಣ ಎಂದರು ಕಾರ್ಯಕರ್ತರ ಸಂಘಟನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಸಜಿಪಮುನ್ನೂರು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ವಜ್ರನಾಥ ಕಲ್ಲಡ್ಕ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ವಂದಿಸಿದರು.ಸಭೆಯಲ್ಲಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ, ಸಹಕಾರಿ ಸಂಘಗಳ ಅಧ್ಯಕ್ಷರಾದ ಜಯಶಂಕರ ಬಾಸ್ರಿತ್ತಾಯ, ಸಂಪತ್ ಕುಮಾರ್ ಶೆಟ್ಟಿ, ನಂದರಾಮ್ ರೈ ಮತ್ತು ಪಕ್ಷದ ಪದಾದಿಕಾರಿಗಳು ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.