ಬಂಟ್ವಾಳ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮತಿ ವತಿಯಿಂದ ಶ್ರೀ ಗಣೇಶೋತ್ಸವ ಆಚರಣೆ ಬಗ್ಗೆ ಸಭೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು. ಮಾಜಿ ಸಚಿವ, ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಮಾತನಾಡಿ, ಕೊರೊನಾ ಕಾರಣ ದಿಂದ ಈ ಬಾರಿ ಸರಕಾರದ ಮಾರ್ಗಸೂಚನೆ ಪ್ರಕಾರ ಸರಳವಾಗಿ ಆಚರಿಸಬೇಕಾಗಿದೆ ಎಂದರು.
ಈ ಬಾರಿ ಜಕ್ರಿಬೆಟ್ಟು ಮೈದಾನದಲ್ಲಿ ಶ್ರೀ ಗಣೇಶೋತ್ಸವ ನಡೆಸಲಾಗದ ಕಾರಣ ದೇವಸ್ಥಾನ ಅಥವಾ ಸಭಾಂಗಣದಲ್ಲಿ ಸಂಪ್ರದಾಯ ಪ್ರಕಾರ ಒಂದು ದಿನ ಮಾತ್ರ ನಡೆಸಲಾಗುವುದು ಎಂದರು. ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್,ಪದಾಧಿಕಾರಿಗಳಾದ ಪಿ.ಜಿನರಾಜ ಆರಿಗ, ಚಂದ್ರಪ್ರಕಾಶ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಜನಾರ್ದನ ಚಂಡ್ತಿಮಾರ್, ಪದ್ಮನಾಭ ರೈ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರವೀಣ್ ಕಿಣಿ, ಪ್ರಶಾಂತ್ ಕುಲಾಲ್, ಸದಾಶಿವ ಬಂಗೇರ, ಮಹಾಬಲ ಬಂಗೇರ ಮತ್ತಿತರರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿ, ವಂದಿಸಿದರು.
inauguration ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕಿನ 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ…
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…