ಜಾಹೀರಾತು
ಮಂಗಳೂರಿಗೆ ನೀರೊದಗಿಸಲು ನಿರ್ಮಿಸಲಾದ ತುಂಬೆ ವೆಂಟೆಡ್ ಡ್ಯಾಂನ ಪಕ್ಕದಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ತಡೆಗೋಡೆಯೊಂದು ಕುಸಿದ ಹಿನ್ನೆಲೆಯಲ್ಲಿ ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ ಭೇಟಿ ನೀಡಿದ್ದಾರೆ.
ಜಾಹೀರಾತು
ವಿಪರೀತ ಮಳೆಯಿಂದ ತುಂಬೆ ಅಣೆಕಟ್ಟು ಆಸುಪಾಸಿನ ತಡೆಗೋಡೆ ನೀರಿನ ಹರಿವು ಹೆಚ್ಚಾದ ಕಾರಣ ಕುಸಿದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಆಯುಕ್ತರು ಮತ್ತು ಮನಪಾ ಅಧಿಕಾರಿಗಳ ತಂಡದೊಂದಿಗೆ ಮೇಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ತಡೆಗೋಡೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ಮತ್ತೆ ಮಳೆಯಾಗುವ ವೇಳೆ ತಡೆಗೋಡೆಗೆ ಹಾನಿಯಾಗದಂತೆ ಕ್ರಮ ಮುಂಜಾಗರೂಕತೆ ವಹಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದ್ದು, ಈ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ. ಇದೇ ವೇಳೆ ತುಂಬೆ ಅಣೆಕಟ್ಟು ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕುಂದುಕೊರತೆಗಳ ಬಗ್ಗೆ ಪರಿಶೀಲಿಸಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತುಂಬೆ ಅಣೆಕಟ್ಟು ಪ್ರದೇಶಕ್ಕೆ ಮಂಗಳೂರು ಮೇಯರ್ ಭೇಟಿ"