ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ಶ್ರದ್ಧಾಂಜಲಿ ಸಭೆ

ಸರ್ವ ಧರ್ಮಗಳ ಜನರೊಂದಿಗೆ ಸಾಮರಸ್ಯದ ಕೊಂಡಿಯಾಗಿದ್ದ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಗ್ರಾಮೀಣ ಪ್ರದೇಶವಾದ ತುಂಬೆ ಗ್ರಾಮದ ಅಭಿವೃದ್ಧಿ ಕುರಿತು ಅತೀವ ಒಲವು ಹೊಂದಿದ್ದರು. ತನ್ನ ಉದ್ಯಮದ ಜೊತೆಗೆ ಬಡವರು, ಸಮಾಜದ ಬಗ್ಗೆ ಚಿಂತಿಸುತ್ತಿದ್ದ ಅವರು ಅದಕ್ಕಾಗಿ ನೆರವು ನೀಡುವ ತುಡಿತ ಹೊಂದಿದ್ದರು ಎಂದು ತುಂಬೆ ಕಾಲೇಜಿನ ಸಂಚಾಲಕ, ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕಾಧ್ಯಕ್ಷ ಬಸ್ತಿ ವಾಮನ ಶೆಣೈ ಹೇಳಿದರು.

ಜಾಹೀರಾತು

ಇತ್ತೀಚೆಗೆ ನಿಧನರಾದ ಬಿ.ಎ. ಗ್ರೂಪ್ ತುಂಬೆ ಹಾಗೂ ಮುಹಿಯುದ್ದೀನ್ ಎಜುಕೇಶನ್ ಟ್ರಸ್ಟ್ ತುಂಬೆ ಸ್ಥಾಪಕರಾದ ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ತುಂಬೆ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

1964ರಿಂದ ಅಹ್ಮದ್ ಹಾಜಿ ಮತ್ತು ನನ್ನ ನಡುವೆ ಸ್ನೇಹ ಸಂಬಂಧವಿದೆ. ತುಂಬೆಯ ಅಭಿವೃದ್ಧಿಯ ಕನಸು ಕಾಣುತ್ತಿದ್ದ ಅಹ್ಮದ್ ಹಾಜಿ ಗ್ರಾಮೀಣ ಮಕ್ಕಳಿಗೆ ಉತ್ತಮ ದರ್ಜೆಯ ಶಿಕ್ಷಣ ಸಿಗುವಂತಾಗಲು ತುಂಬೆಯಲ್ಲಿ ತೆರೆದ ಶಾಲಾ, ಕಾಲೇಜು ಶೈಕ್ಷಣಿಕವಾಗಿ ತುಂಬೆಯ ಚಿತ್ರಣವನ್ನೇ ಬದಲಾಯಿಸಿದೆ. ದೇವರ ಮೇಲೆ ಅಪಾರವಾದ ಭಕ್ತಿಯನ್ನು ಹೊಂದಿದ್ದ ಅಹ್ಮದ್ ಹಾಜಿ ಅವರು ಆದರ್ಶದ ಜೀವನವನ್ನು ನಡೆಸಿದ್ದಾರೆ. ಇತರ ಧರ್ಮಗಳು, ಧರ್ಮ ಗ್ರಂಥಗಳ ಅದ್ಯಯನ ಕೂಡಾ ಮಾಡುತ್ತಿದ್ದರು. ಅವರಂತಹ ಸ್ನೇಹಿತ ಸಿಕ್ಕಿರುವುದು ತನ್ನ ಪುಣ್ಯವಾಗಿದೆ‌ ಎಂದು ಹೇಳಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರು ಓರ್ವ ಉದ್ಯಮಿಯಾಗಿ ಗುರುತಿಸುವುದಕ್ಕಿಂತ ಹೆಚ್ಚಾಗಿ ಓರ್ವ ನಿಸ್ವಾರ್ಥ ಸಮಾಜ ಸೇವಕರಾಗಿ ಗುರುತಿಸಿದ್ದಾರೆ. ಸಮುದಾಯ, ಸಮಾಜದ ಬಗ್ಗೆ ನಿರಂತರ ಕಳಕಳಿ ಹೊಂದಿದ್ದ ಅವರು ಸಾಮಾಜಿಕ ನ್ಯಾಯವನ್ನು ಜೀವನುದ್ದಕ್ಕೂ ಅಳವಡಿಸಿದ್ದ ನಾಯಕರಾಗಿದ್ದರು ಎಂದು ಹೇಳಿದರು.

ಜಾಹೀರಾತು

ಯೆನೆಪೊಯ ಯುನಿವರ್ಸಿಟಿಯ ಚಾನ್ಸಿಲರ್ ಅಬ್ದುಲ್ಲಾ ಕುಂಞಿ ಮಾತನಾಡಿ, ನಮ್ಮ ಬಾವ ಬಿ.ಅಹ್ಮದ್ ಹಾಜಿ ನಿಧನ ನಮ್ಮ ಕುಟುಂಬ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಕುಟುಂಬದ ಹಿರಿಯರೂ, ಮಾರ್ಗದರ್ಶಕರೂ ಅಗಿದ್ದ ಅವರು ಮನುಷ್ಯತ್ವಕ್ಕೆ ಬೆಲೆ ಕಟ್ಟುತ್ತಿದ್ದ ಮಹಾನ್ ಮಾನವತಾವಾದಿ ಆಗಿದ್ದರು ಎಂದು ಹೇಳಿದರು.

ಶಾಸಕ ಯು.ಟಿ.ಖಾದರ್ ಮಾತನಾಡಿ, ತನ್ನ ಶಾಶ್ವತ ಹೆಸರನ್ನು ಶಾಶ್ವತವಾಗಿ ಉಳಿಸಿ ನಮ್ಮನ್ನು ಅಗಲಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ಅವರ ಜೀವನ ಇಡೀ ಯುವ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಅಹ್ಮದ್ ಹಾಜಿ ಅವರ ಪುತ್ರ ಸಲಾಂ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಎಸ್.ಡಿ.ಪಿ.ಐ. ಕರ್ನಾಟಕ ಅಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಮಾತನಾಡಿದರು. ಅಹ್ಮದ್ ಹಾಜಿ ಅವರ ಪುತ್ರರಾದ ಗಲ್ಫ್ ಯುನಿವರ್ಸಿಟಿ ಸಂಸ್ಥಾಪಕ ತುಂಬೆ ಮೊಯ್ದಿನ್, ಬಿ.ಎಂ. ಅಶ್ರಫ್ ಉಪಸ್ಥಿತರಿದ್ದರು.

ಜಾಹೀರಾತು

ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತುಂಬೆ ಶಾಲಾ ವಿದ್ಯಾರ್ಥಿ ಅಫ್ನಾನ್ ಕಿರಾಅತ್ ಪಠಿಸಿದರು. ಉಪನ್ಯಾಸಕ ದಿನೇಶ್ ಶೆಟ್ಟಿ ಧನ್ಯವಾದಗೈದರು. ಅಬ್ದುಲ್ ಕಬೀರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮೌನ ಪ್ರಾಥನೆ ಸಲ್ಲಿಸಲಾಯಿತು‌.

ಜಾಹೀರಾತು

 

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರಿಗೆ ಶ್ರದ್ಧಾಂಜಲಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*