ಜಾಹೀರಾತು
ಬಂಟ್ವಾಳ: ಸತೀಶ್ ಭಂಡಾರಿ ಅಧ್ಯಕ್ಷತೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ವಠಾರದಲ್ಲಿ ಸರಳ ಗಣೇಶೋತ್ಸವವನ್ನು ಈ ಬಾರಿ ಸರ್ಕಾರದ ನಿಯಮಾವಳಿ ಪ್ರಕಾರ ಆಚರಿಸಲಾಯಿತು. ಶನಿವಾರ ಬೆಳಗ್ಗೆ 9.30 ಕ್ಕೆ ಬಂಟ್ವಾಳ ಶ್ರೀ ಸೀತಾರಾಮ ದೇವಸ್ಥಾನದಿಂದ ಗಣೇಶನ ಮೂರ್ತಿಯನ್ನು ತಂದು ಬಿ ಸಿ ರೋಡು ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದ ಸಭಾಂಗಣದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ಮಧ್ಯಾಹ್ನ 12.30 ಕ್ಕೆ ಮಹಾಪೂಜೆ ನಡೆದು, ಸಂಜೆ 4.30 ಕ್ಕೆ ವಿಸರ್ಜನೆ ಪೂಜೆ ನಡೆಯಿತು. ನಂತರ ಶ್ರೀ ವೆಂಕಟ್ರಮಣ ಸ್ವಾಮಿ ದೇವಾಲಯದ ಬಳಿಯ ನೇತ್ರಾವತಿ ನದಿಯಲ್ಲಿ ಜಲಾಧಿವಾಸ ಗೊಳಿಸಲಾಯಿತು. ಈ ವೇಳೆ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡಿನಲ್ಲಿ 41ನೇ ವರ್ಷದ ಗಣೇಶೋತ್ಸವ"